ರಾಜ್ಯದಲ್ಲಿ ಆಳುವ ಪಕ್ಷದ 25 ಎಂಪಿಗಳು ಯಾವ ಪುರುಷಾರ್ಥಕ್ಕೆ: ಶ್ರೀಕಾಂತ್ ಸಾಲ್ಯಾನ್
ಬೆಂಗಳೂರು, ಮೇ 3, ರಾಜ್ಯದಲ್ಲಿ ಆಡಳಿತ ಪಕ್ಷದ 25 ಸಂಸದರಿದ್ದರೂ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಊರಿಗೆ ಕಳಿಸಲು ಸಾಧ್ಯವಾಗದಿರುವುದು ನಾಚಿಕೆಗೇಡು. ನಮ್ಮ ಪಕ್ಕದ ರಾಜ್ಯವಾದ ಕೇರಳವನ್ನಾದರು ನೋಡಿ ಸ್ವಲ ಕಲಿಯಬಾರದೇ. ಕೇರಳದಿಂದ ಇತರೆ ರಾಜ್ಯದ ಕಾರ್ಮಿಕರನ್ನು ಸ್ಪೆಷಲ್ ರೈಲು ಸೌಕರ್ಯ ಮಾಡಿ ಕಳುಹಿಸಿದ್ದಾರೆ. ಆದರೆ ನಮ್ಮ ರಾಜ್ಯ ಸರಕಾರ ಈ ಬಗ್ಗೆ ಗಂಭೀರವಾದ ಚಿಂತನೆ ನಡೆಸದಿರುವುದು ವಿಷಾದಕರವಾಗಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯದ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್ ಕಿಡಿಕಾರಿದ್ದಾರೆ.ಕಾರ್ಮಿಕರ ಕಲ್ಯಾಣ ನಿಧಿಯ ಮೊತ್ತವನ್ನು ಈ ಸಂಧರ್ಭದಲ್ಲಿ ಉಪಯೋಗಿಸಿ ಕಾರ್ಮಿಕರ ಸೇವೆ ಮಾಡಬೇಕಾದ್ದು ಸರಕಾರದ ಕರ್ತವ್ಯವೆಂಬುದನ್ನು ಸರಕಾರ ಮರೆತಂದಿದೆ.ಕೇವಲ ಕಾರ್ಮಿಕರ ದಿನಾಚರಣೆಯ ಸಂಧರ್ಭದಲ್ಲಿ ಶುಭಾಶಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಕಾರ್ಮಿಕರ ಮೇಲೆ ಪ್ರೀತಿ ಕರುಣೆ ಇದ್ದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರ ಕೈಹಿಡಿಯಬೇಕಾಗಿದೆ. ಆದ್ದರಿಂದ ಸರಕಾರವು ಕೂಡಲೇ ರಾಜ್ಯದಲ್ಲಿರುವ ದೇಶದ ವಿವಿಧ ಭಾಗದ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರಿಗೆ ತಲುಪಿಸಬೇಕೆಂದು ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 