ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ ದೇಣಿಗೆ: ಕೆಎಫ್ ಸಿಸಿ
ಬೆಂಗಳೂರು, ಆ 17 ರಾಜ್ಯದ ಹಲವೆಡೆ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ
2018-19ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡ ಹಾಗೂ ಕೊಂಕಣಿ ಕಲಾವಿದರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು
ನೆರ ಪೀಡಿತ ಜನರಿಗಾಗಿ ವಾಣಿಜ್ಯ ಮಂಡಳಿ ಸ್ಪದಿಸುತ್ತದೆ ಕೊಚ್ಚಿ ಹೋಗಿರುವ ಬದುಕು ಕಟ್ಟಿಕೊಳ್ಳಲು ಅಳಿಲು ಸೇವೆ ಸಲ್ಲಿಸುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಸಾರಾ.ಗೋವಿಂದು, ಎಸ್.ಎ.ಚಿನ್ನೆಗೌಡ, ಪದಾದಿಕಾರಿಗಳು ಉಪಸ್ತಿತರಿದ್ದರು.
ರಾಷ್ಟ್ರಪ್ರಶಸ್ತಿ ಗಳಿಸಿರುವ ಒಂದಲ್ಲಾ ಎರಡಲ್ಲ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ರೋಹಿತ್, ನಟ, ನಿರ್ದೇಶಕ ರಿಶಬ್ಶೆಟ್ಟಿ, ಕೆಜಿಎಫ್ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರುಗಳಾದ ಅನ್ಬುಅರಿವು ಮುಂತಾದವರು ಗೌರವವನ್ನು ಸ್ವೀಕರಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 