ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ ದೇಣಿಗೆ: ಕೆಎಫ್ ಸಿಸಿ
ಬೆಂಗಳೂರು, ಆ 17 ರಾಜ್ಯದ ಹಲವೆಡೆ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ
2018-19ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡ ಹಾಗೂ ಕೊಂಕಣಿ ಕಲಾವಿದರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು
ನೆರ ಪೀಡಿತ ಜನರಿಗಾಗಿ ವಾಣಿಜ್ಯ ಮಂಡಳಿ ಸ್ಪದಿಸುತ್ತದೆ ಕೊಚ್ಚಿ ಹೋಗಿರುವ ಬದುಕು ಕಟ್ಟಿಕೊಳ್ಳಲು ಅಳಿಲು ಸೇವೆ ಸಲ್ಲಿಸುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಸಾರಾ.ಗೋವಿಂದು, ಎಸ್.ಎ.ಚಿನ್ನೆಗೌಡ, ಪದಾದಿಕಾರಿಗಳು ಉಪಸ್ತಿತರಿದ್ದರು.
ರಾಷ್ಟ್ರಪ್ರಶಸ್ತಿ ಗಳಿಸಿರುವ ಒಂದಲ್ಲಾ ಎರಡಲ್ಲ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ರೋಹಿತ್, ನಟ, ನಿರ್ದೇಶಕ ರಿಶಬ್ಶೆಟ್ಟಿ, ಕೆಜಿಎಫ್ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರುಗಳಾದ ಅನ್ಬುಅರಿವು ಮುಂತಾದವರು ಗೌರವವನ್ನು ಸ್ವೀಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 