ಇಂದುಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ
38th Anniversary of Indusree Kailasa Varasiddhi Ganapathi Temple
ಲೋಕದರ್ಶನ ವರದಿ
ಗದಗ 04: ನಗರದ ಮಸಾರಿ, ವಿನಾಯಕ ನಗರ, ಜೆ.ಟಿ.ಕಾಲೇಜ್ ಬಳಿಯ ಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ ಸಮಾರಂಭ ಎ.5 ರಂದು ರವಿವಾರ ಜರುಗಲಿದೆ. ಮುಂಜಾನೆ 7 ಗಂಟೆಯಿಂದ ಗಣಪತಿ ದೇವರಿಗೆ ಫಲ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಮುಂಜಾನೆ 9 ಗಂಟೆಯಿಂದ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಕಲಾತತ್ವ ಹೋಮ, ಪಂಚವಿಂಶತಿ ಕಲಶಾಭಿಷೇಕ, ಗಣಹೋಮ, ನವಗ್ರಹ ಶಾಂತಿ, ಸುಬ್ರಹ್ಮಣ್ಯ ಹೋಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ, ಪ್ರಸಾದ ವಿತರಣೆ(ಅನ್ನ ಸಂತರೆ್ಣ), ರಾತ್ರಿ 9ಕ್ಕೆ ರಂಗ ಪೂಜಾ ಅಷ್ಟಾವಧಾನ ಸೇವೆ ಜರುಗಲಿದೆ. ಸದ್ಭಕ್ತರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ತನು, ಮನ, ಧನಕನಕಾಧಿಗಳನ್ನಿತ್ತು ಶ್ರೀಗಣಪತಿ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 