5ರೂ.ಗೆ ಊಟ, ತಿಂಡಿ ನೀಡುವ 'ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದ ಆಂಧ್ರ ಸಿಎಂ
ವಿಜಯವಾಡ 11: ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್, ಕನರ್ಾಟಕದಲ್ಲಿ ಇಂದಿರಾ ಕ್ಯಾಂಟೀನ್ ನಂತರ ಈಗ ಆಂಧ್ರಪ್ರದೇಶದಲ್ಲಿ ಕಡಿಮೆ ದರದಲ್ಲಿ ಆಹಾರ ಪೂರೈಸುವ 'ಅಣ್ಣಾ ಕ್ಯಾಂಟೀನ್ಗೆ ಬುಧವಾರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಚಾಲನೆ ನೀಡಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಇಂದು ವಿಜಯವಾಡದ ಭವಾನಿಪುರದಲ್ಲಿ ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದರು.
ವಿಜಯವಾಡದಲ್ಲಿ ಒಟ್ಟು 60 ಅಣ್ಣಾ ಕ್ಯಾಂಟೀನ್ಗೆ ಇಂದು ಚಾಲನೆ ನೀಡಲಾಗಿದ್ದು, ರಾಜ್ಯಾದ್ಯಂತ 203 ಕ್ಯಾಂಟೀನ್ ಸ್ಥಾಪಿಸುವ ಗುರಿ ಇದೆ ಎಂದು ಸಕರ್ಾರ ಪ್ರಕಟಣೆಯಲ್ಲಿ ತಿಳಿಸಿದೆ.
ನೂತನವಾಗಿ ಉದ್ಘಾಟನೆ ಯಾಗಿರುವ ಈ ಕ್ಯಾಂಟೀನ್ಗಳಲ್ಲಿ ಐದು ರೂಪಾಯಿಗಳಿಗೆ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ನೀಡಲಾಗುತ್ತದೆ. ಮೂರು ಇಡ್ಲಿ/ ಮೂರು ಪೂರಿ/ ಉಪ್ಪಿಟ್ಟು / ಪೊಂಗಲ್ ಅನ್ನು ಉಪಹಾರವಾಗಿ ನೀಡಿದರೆ, ಭೋಜನವಾಗಿ ಅನ್ನ ಸಾಂಬಾರ್, ದಾಲ್, ಉಪ್ಪಿನಕಾಯಿ, ಕರರ್ಿ ಮತ್ತು ಮೊಸರು ನೀಡಲಾಗುತ್ತಿದ್ದು, ಎಲ್ಲದ್ದಕ್ಕೂ ಒಂದೇ ದರ ನಿಗದಿಪಡಿಸಲಾಗಿದೆ.
ಬಡವರು ಕೇವಲ 15 ರುಪಾಯಿಗಳಲ್ಲಿ ದಿನದ ಮೂರು ಹೊತ್ತಿನ ಆಹಾರ ಪಡೆಯಬೇಕು ಎಂಬುದೇ ಈ ಕಾರ್ಯಕ್ರಮದ ಹಿಂದಿನ ಉದ್ದೇಶ ಎಂದು ಆಂಧ್ರಪ್ರದೇಶ ಸಚಿವ ಪಿ ನಾರಾಯಣ ಅವರು ತಿಳಿಸಿದ್ದಾರೆ.
ಯೋಜನೆಯ ಉಸ್ತುವಾರಿಯನ್ನು ಅಕ್ಷಯ ಪಾತ್ರ ಪ್ರತಿಷ್ಠಾನಕ್ಕೆ ನೀಡಲಾಗಿದೆ. ನಿತ್ಯ 2 ಲಕ್ಷ ಮಂದಿಗೆ ಆಹಾರ ಪೂರೈಸುವ ಉದ್ದೇಶವನ್ನು ಈ ಕಾರ್ಯಕ್ರಮ
ಹೊಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 