ಬೆಳಗಾವಿ: ಗಣಪತಿ ದೇವಸ್ಥಾನ ಕಟ್ಟಡ ನಿಮರ್ಾಣಕ್ಕೆ 50 ಸಾವಿರ ರೂ. ಅನುದಾನ ವಿತರಣೆ
ಲೋಕದರ್ಶನ ವರದಿ
ಬೆಳಗಾವಿ 29: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಚುಂಚವಾಡ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟಡ ನಿಮರ್ಾಣಕ್ಕೆ ಧರ್ಮಸ್ಥಳದ ಧಮರ್ಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಮಹತ್ವಾಕಾಂಕ್ಷಿ ಯೋಜನೆ ವತಿಯಿಂದ 50 ಸಾವಿರ ರೂ.ಗಳ ಅನುದಾನದ ಡಿ.ಡಿ. ವಿತರಿಸಲಾಯಿತು.
ಮಂಜೂರಾದ ಅನುದಾನದ ಹಣದ ಡಿ.ಡಿ. ವಿತರಣಾ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಶಂಕರ ಗೋಸೆನಟ್ಟಿ, ಉಪಾಧ್ಯಕ್ಷ ಶಿವಾನಂದ ಗೊದೊಳ್ಳಿ , ಸಮಿತಿಯ ಸರ್ವ ಸದಸ್ಯರು ಗ್ರಾಮದ ಗಣ್ಯರ ಸಮಕ್ಷಮದಲ್ಲಿ ಧರ್ಮಸ್ಥಳ ಯೋಜನೆಯ ಖಾನಾಪುರ ಘಟಕದ ಯೋಜನಾಧಿಕಾರಿ ರಿಯಾಜ ಅತ್ತಾರ ವಿತರಿಸಿದರು.
ಧರ್ಮಸ್ಥಳ ಸಂಘಗಳ ಒಕ್ಕೂಟ ಅಧ್ಯಕ್ಷರು,ಪದಾಧಿಕಾರಿಗಳು, ಸೇವಾ ಪ್ರತಿನಿಧಿ ರೇಣುಕಾ, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಗಳು, ಯೋಜನೆಯ ಅನುದಾನಗಳು, ಗ್ರಾಮ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ರಿಯಾಜ ಅತ್ತಾರ ಮಾಹಿತಿ ನೀಡಿದರು. ಮಹಾಬಲೇಶ್ವರ ವಾರದ ದೇವಾಲಯದ ಅಭಿವೃದ್ಧಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಮಿತಿ ಅಧ್ಯಕ್ಷರ ಹಾಗೂ ಗ್ರಾ.ಪಂ.ಸದಸ್ಯ ಶಿವಶಂಕರ ಗೋಸೆನಟ್ಟಿ ಮಂಜೂರಾದ ಅನುದಾನದ ಬಳಕೆ ಮತ್ತು ಧರ್ಮಸ್ಥಳ ಯೋಜನೆಯ ಅಭಿವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಲಿಂಗನಮಠ ಗ್ರಾ.ಪಂ.ಮಾಜಿ ಅಧ್ಯಕ್ಷ ಶಿವಾನಂದ ಗೊದೋಳ್ಳಿ ಕಾರ್ಯಕ್ರಮ ನಿರೂಪಿಸಿದರು.ಸೇವಾ ಪ್ರತಿನಿಧಿ ರೇಣುಕಾ ಸ್ವಾಗತಿಸಿದರು. ವಲಯದ ಮೇಲ್ವಿಚಾರಕ ಪ್ರವೀಣ ದೊಡಮನಿ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 