ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು,
ಮಾ.31, ಕೊರೋನಾ ಸೋಂಕು ತಡೆಗೆ ಹಾಗೂ ಸೋಂಕಿತರ ರಕ್ಷಣೆಗೆ ಪ್ರಧಾನಿ ನರೇಂದ್ರ
ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ನೀಡಿದಂತೆ ಸ್ಯಾಂಡಲ್ವುಡ್
ನಟ ಪವರ್ ಸ್ಟಾರ್ ಪುನೀತ್ ರಾಜ್ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಡಾಲರ್ಸ್
ಕಾಲೋನಿಯ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು
ಇಂದು ಭೇಟಿ ಮಾಡಿದ ನಟ ಪುನೀತ್ ರಾಜಕುಮಾರ್, ಕೊರೋನಾ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ಚೆಕ್ ನೀಡಿದರುಪುನೀತ್
ರಾಜಕುಮಾರ್ ಮಾತನಾಡಿ, ಕೊರೊನಾ ನಿಯಂತ್ರಿಸಲು ಸಾಮಾಜಿಕ ಅಂತರವೊಂದೇ ಮಾರ್ಗ. ಪ್ರಧಾನಿ
ಮೋದಿ ಹಾಗೂ ಕರ್ನಾಟಕ ಸರ್ಕಾರ ಹೇಳುವುದನ್ನು ಎಲ್ಲರೂ ಅನುಸರಿಸಬೇಕು. ಅವರು ನೀಡುವ
ಸೂಚನೆಯನ್ನು ಪಾಲಿಸಬೇಕು. ಮನೆಯಲ್ಲಿ ಇರುವುದು ಕಷ್ಟ ಆಗಬಹುದು, ಆದರೆ ಇದು ಅನಿವಾರ್ಯ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಕರೆ ನೀಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 