ಮಂದಿರ ನಿರ್ಮಾಣಕ್ಕಾಗಿ ವಕ್ಫ್ ಬೋರ್ಡ್ನಿಂದ 51 ಸಾವಿರ ರೂಪಾಯಿ ದೇಣಿಗೆ
ಲಕ್ನೋ ,ನ 15 : ಮಹತ್ವದ ಬೆಳವಣಿಗೆಯಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಉತ್ತರಪ್ರದೇಶದ ಶಿಯಾ ವಕ್ಫ್ ಬೋರ್ಡ51 ಸಾವಿರ ರೂಪಾಯಿ ದೇಣಿಗೆ ನೀಡುವುದಾಗಿ ಪ್ರಕಟಿಸಿದೆ. ಮಂಡಳಿಯ ಅಧ್ಯಕ್ಷ ವಾಸಿಂ ರಿಝ್ಮಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು , ಸುಪ್ರೀಂಕೋರ್ಟ್ ತೀಪು ಸಾಧ್ಯವಾದ ರೀತಿಯಲ್ಲಿ ಉತ್ತಮ ತೀಪು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ. ಉತ್ತರಪ್ರದೇಶದ ಅಯೋಧ್ಯೆಯ ವಿವಾದ ಸ್ಥಳದಲ್ಲಿಯೇ ರಾಮಮಂದಿರ ನಿರ್ಮಾಣದ ಬಗ್ಗೆ ಸುಪ್ರೀಂಕೋರ್ಟ್ನ ಪಂಚಸದಸ್ಯ ಸಾಂವಿಧಾನಿಕ ಪೀಠ ಸರ್ವಾನುಮತದ ತೀರ್ಪನ್ನು ಪ್ರಕಟಿಸಿತ್ತು. ಅಲ್ಲದೇ ಮಸೀದಿ ನಿರ್ಮಾಣಕ್ಕಾಗಿ ಪ್ರತ್ಯೇಕವಾಗಿ 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಬೋರ್ಡ್ಗೆ ನೀಡಬೇಕು ಎಂದು ಆದೇಶ ಮಾಡಿತ್ತು. ಅಯೋಧ್ಯೆಯಲ್ಲಿ ಬೃಹತ್ ರಾಮಮಂದಿರ ನಿರ್ಮಾಣದ ಕಾರ್ಯ ನಡೆಯುತ್ತಿದೆ . ರಾಮ ಎಲ್ಲರಿಗೂ ಆದರ್ಶ ಪುರುಷ ಹೀಗಾಗಿ ನಾವು ಸಹ ರಾಮಮಂದಿರ ನಿರ್ಮಾಣಕ್ಕಾಗಿ ಸಹಾಯ ಹಸ್ತ ಚಾಚಿ, 51 ಸಾವಿರ ರೂಪಾಯಿ ದೇಣಿಗೆಯನ್ನು ನೀಡುವುದಾಗಿ ಹೇಳಿದ್ದಾರೆ . ಇದಕ್ಕೆ ಅಸ್ಸಾಂನ 21ವಿವಿದ ಮಸ್ಲಿಂ ಸಂಘಟನೆಗಳು ಮಂದಿರ ನಿರ್ಮಾಣ ಮಾಡಲು 5 ಲಕ್ಷರೂಪಾಯಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದ್ದವು ನಂತರ ಅದರ ಬೆನ್ನಲ್ಲೇ ಈಗ ಸುನ್ನಿ ಮಂಡಳಿ ನೆರವಿನ ಹಸ್ತಚಾಚಿದೆ.ಮಂದಿರ ನಿಮರ್ಾಣಕ್ಕೆ ಮುಸ್ಲಿಂ ಸಂಘಟನೆಗಳು ಕೈಜೊಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 