ರಾಜ್ಯದಲ್ಲಿ 6 ಹೊಸ ಸೋಂಕು ಪ್ರಕರಣ ದೃಡ : ಸಾವಿನ ಸಂಖ್ಯೆ 5 ಕ್ಕೆ ಏರಿಕೆ
ಬೆಂಗಳೂರು, ಏ 8, ರಾಜ್ಯದಲ್ಲಿ ಇಂದು ಹೊಸದಾಗಿ 6 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಈವರೆಗೆ 181ಕ್ಕೆ ಏರಿಕೆಯಾಗಿದ್ದು ಈಗಾಗಲೇ 5 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ, ಕಲಬುರ್ಗಿಯಲ್ಲಿ ಇಬ್ಬರಿಗೆ, ಮಂಡ್ಯದಲ್ಲಿ ಮತ್ತೊಬ್ಬರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ಖಚಿತವಾಗಿದೆ. ಅಂದಹಾಗೇ ಕಲಬುರ್ಗಿಯಲ್ಲಿ 175ನೇ ಸೋಂಕಿತನಿಂದಾಗಿ ಅವರ ತಾಯಿಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಮಂಡ್ಯದಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿದೆ. ಇನ್ನೂಳಿದಂತೆ ಬೆಂಗಳೂರಿನ ವ್ಯಕ್ತಿಗೆ ದೆಹಲಿ ಪ್ರಯಾಣದ ನಂತರ ಸೋಂಕು ವ್ಯಾಪಿಸಿದೆ ಒಟ್ಟಾರೆಯಾಗಿ ಇದುವರೆಗೆ ರಾಜ್ಯದಲ್ಲಿ 181 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಈಗಾಗಲೇ 5 ಜನರು ಸಾವನ್ನಪ್ಪಿದ್ದಾರೆ. 28 ಜನರು ಇದರಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 