60 ಸಾವಿರ ರೂ. ಗಾಂಜಾ ವಶ : ಇಬ್ಬರ ಬಂದನ
60 thousand rupees worth of ganja seized: Two arrested
60 ಸಾವಿರ ರೂ. ಗಾಂಜಾ ವಶ : ಇಬ್ಬರ ಬಂದನ
ಮುಂಡಗೋಡ, 10 : ತಾಲೂಕಿನ ಪಾಳಾ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಮೇಲೆ ಮುಂಡಗೋಡ ಪೋಲಿಸರು ದಾಳಿ ನಡೆಸಿ 900ಗ್ರಾಂ ತೂಕದ ಗಾಂಜಾ ಸಮೇತ ಆರೋಪಿತರನ್ನು ಬಂಧಿಸಿದ ಘಟನೆ ಶನಿವಾರ ಸಾಯಂಕಾಲ ನಡೆದಿದೆ.
ಆರೋಪಿತನಾದ ಹಾನಗಲ್ ತಾಲೂಕಿನ ಮುಜಾಫರ್ ಅಹ್ಮದ್ ಬ್ಯಾಡಗಿ ಪ್ರಶಾಂತ್ ಅಕ್ಕಿವಳಿ ಎಂಬುವವ ಆರೋಪಿತರನ್ನು ಶನಿವಾರ ಬಂಧಿಸಿದ್ದಾರೆ.ಇನ್ನೋಬ್ಬ ಆರೋಪಿತನಾದ ಹಾನಗಲ್ ಪಟ್ಟಣದ ನವನಗರ ನಿವಾಸಿ ಇಮ್ರಾನ್ ಬ್ಯಾಡಗಿ ಎಂಬಾತನಿಂದ 60000 ರೂ. ಮೌಲ್ಯದ ಗಾಂಜಾವನ್ನು ಪಡೆದುಕೊಂಡು ಬ್ಯಾಗ್ ನಲ್ಲಿ ಇಟ್ಟುಕೊಂಡು ಬೈಕ್ನಲ್ಲಿ ಹುಬ್ಬಳ್ಳಿ ಮಾರ್ಗವಾಗಿ ಹೋಗುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪಾಳಾ ಕ್ರಾಸ್ ಬಳಿ ಪಿಎಸೈ ಪರಶುರಾಮ ಮಿರ್ಜಗಿ ನೇತೃತ್ವದ ತಂಡ ದಾಳಿ ನಡೆಸಿ 900ಗ್ರಾಂ ತೂಕದ ಗಾಂಜಾ, ಸಾಗಾಟಾಕ್ಕೆ ಬಳಿಸಿದ ಬೈಕ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ ಜಿ., ಜಗದೀಶ ನಾಯ್ಕ, ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ, ಮಾರ್ಗದರ್ಶನದಲ್ಲಿ ಸಿಪಿಐ ಆರ್. ನೀಲಮ್ಮನವರ, ಪಿಎಸೈ ಪರಶುರಾಮ ಮಿರ್ಜಗಿ ನೇತೃತ್ವದಲ್ಲಿ, ಸಿಬ್ಬಂದಿಗಳಾದ ಮಂಜಪ್ಪ ಚಿಂಚಲಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುದೋಳ, ಬಸವರಾಜ ಒಡೆಯರ ಮತ್ತು ಮಂಜುನಾಥ ಓಣಿಕೇರಿ ಕಾರ್ಯಚರಣೆಯಲಿದ್ದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 