ಕಾಗವಾಡ ಶಿವಾನಂದ ಮಹಾವಿದ್ಯಾಲಯದಲ್ಲಿ 60ನೇ ಸಂಸ್ಥಾಪನಾ ದಿನಾಚರಣೆ
60th Foundation Day Celebrations at Kagawad Shivananda College
ಲೋಕದರ್ಶನ ವರದಿ
ಕಾಗವಾಡ 21 : ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತವಾದ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದ ಶಿವಾನಂದ ಮಹಾವಿದ್ಯಾಲಯ 60ನೇ ವರ್ಷದಲ್ಲಿ ಪಾದಾರೆ್ನ ಮಾಡಿದ್ದು, ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡಿದೆ ಎಂದು ಮಹಾವಿದ್ಯಾಲಯದ ಕಾರ್ಯದರ್ಶಿ ಪ್ರೊ. ಬಿ.ಎ. ಪಾಟೀಲ ಹೇಳಿದ್ದಾರೆ.
ಅವರು, ಶನಿವಾರ ದಿ. 20 ರಂದು ಶಿವಾನಂದ ಮಹಾವಿದ್ಯಾಯಲದ ಸಂಸ್ಥಾಪನಾ ದಿನದ ನಿಮಿತ್ಯ ನಡೆದ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಜ್ಞಾನ ಪ್ರಸಾರಕ್ಕಾಗಿ ಉನ್ನತ ಶಿಕ್ಷಣ ನೀಡುತ್ತಾ, ಅನೇಕ ಪೂಜ್ಯರ ಶ್ರಮದಿಂದಾಗಿ 60 ವಸಂತಗಳನ್ನು ಪೂರೈಸಿರುವ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಸುಮಾರು 1800 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು, 60 ಕ್ಕಿಂತ ಹೆಚ್ಚು ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ಮಾತನಾಡಿ, ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇಲ್ಲಿಯ ವಿದ್ಯಾರ್ಥಿಗಳು ಸಮಾಜವನ್ನು ಕಟ್ಟುವಂತ ಕೆಲಸ ಮಾಡಬೇಕು. ನಿಮ್ಮೊಂದಿಗೆ ಸದಾ ಬೆನ್ನಲುಬಾಗಿ ನಿಲ್ಲುತ್ತೇವೆ ಎಂದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಪಪೂ ಯತೀಶ್ವರಾನಂದ ಶ್ರೀಗಳು, ಪಪೂ ಡಾ. ಶ್ರದ್ಧಾನಂದ ಶ್ರೀಗಳು ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.
ಈ ವೇಳೆ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು, ಪದವಿ ಮತ್ತು ಪದವಿ ಪೂರ್ವ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕಾವೇರಿ ಶೆಮಡೆ ಮತ್ತು ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ.ಬಿ. ನಂದಾಳೆ ಸ್ವಾಗತಿಸಿದರು. ಪ್ರೊ. ಎಂ.ಎಸ್. ಮಾಂಜರಿ ನಿರೂಪಿಸಿದರು. ಪ್ರೊ. ಟಿ.ವಿ. ಧಬಾಡೆ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 