ಗಣಿ ಜಿಲ್ಲೆಯಲ್ಲಿ 7 ಬಾಲ್ಯ ವಿವಾಹ ತಡೆದ ಅಧಿಕಾರಿಗಳು
ಲೋಕದರ್ಶನವರದಿ
ಬಳ್ಳಾರಿ೨೭: ಗಣಿ ಜಿಲ್ಲೆಯ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ 7 ಬಾಲ್ಯ ವಿವಾಹಗಳನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆಹಿಡಿದಿದ್ದಾರೆ.
ಬಾಲ್ಯ ವಿವಾಹಕ್ಕೆ ತಯಾರಿ ನಡೆಸಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಿವಾಹಗಳನ್ನ ತಡೆಹಿಡಿದಿದ್ದಾರೆ. ಬಳ್ಳಾರಿಯ ವಿನಾಯಕ ನಗರದಲ್ಲಿ ಬಾಲಕಿಗೆ ನಡೆಯುತ್ತಿದ್ದ ನಿಶ್ಚಿತಾರ್ಥ ಹಾಗೂ ಬಳ್ಳಾರಿ ತಾಲ್ಲೂಕಿನ ಬೆಳಗಲ್ಲು ತಾಂಡಾ 1, ಕಕ್ಕಬೇವಿನಹಳ್ಳಿ 1, ಶಂಕರ ಬಂಡೆಯಲ್ಲಿ 2, ಕುರುಗೋಡು ತಾಲೂಕಿನ ಬಸಾಪುರ 1, ಸಿರುಗುಪ್ಪ ತಾಲೂಕಿನ ಹಾಗಲೂರು ಹೊಸಳ್ಳಿಯ ಬಾಲಕಿ ಮತ್ತು ಸಿಂಧಿಗೇರಿಯ ಯುವಕನೊಂದಿಗೆ ನಡೆಯುತ್ತಿದ್ದ ಒಟ್ಟು 7 ಬಾಲ್ಯ ವಿವಾಹಗಳನ್ನ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿಯಲ್ಲಿ ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಲಾಲಪ್ಪ, ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾರಾಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೈಯದ್ ಚಾಂದ್ ಪಾಷಾ, ಸಿಬ್ಬಂದಿಯಾದ ಈಶ್ವರ್ ರಾವ್, ಉಮೇಶ್, ನಗರ ಅಂಗನವಾಡಿ ಮೇಲ್ವಿಚಾರಕಿ, ಗ್ರಾಮೀಣ ಠಾಣೆಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿದರ್ೆಶಕ ಆರ್.ನಾಗರಾಜ ತಿಳಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 