ಏಳು ತಿಂಗಳು… ಏಳನೇ ಬಜೆಟ್ ಮಂಡನೆ…. !!!
ಬೆಂಗಳೂರು, ಮಾರ್ಚ್.5, ಕಳೆದ ಜುಲೈನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ 7 ತಿಂಗಳ ಅವಧಿ ಪೂರೈಸಿದ್ದಾರೆ. ಕಾಕತಾಳೀಯವೋ ಏನೋ ಎಂಬಂತೆ ಇಂದು ಏಳನೇ ಬಜೆಟ್ ಮಂಡಿಸಿದ್ದಾರೆ. ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತು, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅವರು ಇಂದು ಏಳನೇ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನೊಂದು ವಿಶೇಷ ಎಂದರೆ ಹಳೆಯ ಮೈಸೂರು ಭಾಗದಿಂದ ಬಜೆಟ್ ಮಂಡನೆ ಮಾಡಿದ ರಾಜಕೀಯ ನಾಯಕರ ಪೈಕಿ ಯಡಿಯೂರಪ್ಪ ಅವರು 32ನೇ ಹಣಕಾಸು ಸಚಿವರಾಗಿದ್ದಾರೆ. ಎಸ್.ಎಂ ಕೃಷ್ಣ, ಮರಿಯಪ್ಪ, ಎಚ್.ಡಿ ದೇವೇಗೌಡ, ಬಿ.ಡಿ ಜತ್ತಿ,ನಿಜಲಿಂಗಪ್ಪ, ಮೊದಲಾದವರು ಸೇರಿದಂತೆ ಹಳೆಯ ಮೈಸೂರು ಭಾಗಕ್ಕೆ ಸೇರಿದ ನಾಯಕರಾಗಿದ್ದಾರೆ. ಕಳೆದ ಜುಲೈ 26 ರಂದು ಬಿಎಸ್ ಯಡಿಯೂರಪ್ಪ 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಮೊಟ್ಟ ಮೊದಲ ಕೃಷಿ ಬಜೆಟ್ ಮಂಡನೆ ಮಾಡಿದ ಕೀರ್ತಿ ಮತ್ತು ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 