71ನೇ ಗಣರಾಜ್ಯೋತ್ಸವ ಪ್ರಯುಕ್ತ ವ್ಹಾಲಿಬಾಲ್ ಪಂದ್ಯಾವಳಿ ಆಯೋಜನೆ
ಬೆಟಗೇರಿ 22: ಗ್ರಾಮದ ವ್ಹಾಲಿಬಾಲ್ ಕ್ಲಬ್ ಆಶ್ರಯದಲ್ಲಿ 71ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಪ್ರಥಮ ಬಾರಿ ಹೊನಲು ಬೆಳಕಿನ ವ್ಹಾಲಿಬಾಲ್ ಪಂದ್ಯಾವಳಿಗಳ ಉದ್ಘಾಟನೆ ಸಮಾರಂಭ ಇದೇ ರವಿವಾರ ಜ.26ರಂದು ಮಧ್ಯಾಹ್ನ 3 ಗಂಟೆಗೆ ಸ್ಥಳೀಯ ವಿವಿಡಿ ಸಕರ್ಾರಿ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ.
ಅರಭಾಂವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪಂದ್ಯಾವಳಿ ಉದ್ಘಾಟನೆ ನೆರವೇರಿಸಲಿದ್ದಾರೆ. ಕೌಜಲಗಿ ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮುಖ್ಯತಿಥಿಗಳಾಗಿ ಆಗಮಿಸಲಿದ್ದಾರೆ. ಗೋಕಾಕ ಎಲ್ಇಟಿ ವ್ಯವಸ್ಥಾಪಕ ನಿದರ್ೇಶಕ ಸನತ ಜಾರಕಿಹೊಳಿ ವಿಶೇಷ ಅತಿಥಿಗಳಾಗಿ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ತಾಪಂ, ಗ್ರಾಪಂ ಹಾಗೂ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಕ್ರೀಡಾಪ್ರೇಮಿಗಳು, ಗಣ್ಯರು ಸಮಾರಂಭದಲ್ಲಿ ಅತಿಥಿಗಳಾಗಿ, ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ವಿಜೇತ ತಂಡಗಳಿಗೆ ಹಲವು ಜನ ಗಣ್ಯರ, ಕ್ರೀಡಾಪ್ರೇಮಿಗಳ ಪ್ರಾಯೋಜಕತ್ವದಲ್ಲಿ ಆಕರ್ಷಕ ನಗದು, ಟ್ರೋಪಿ ನೀಡಲಿದ್ದಾರೆ. ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುವ ತಂಡದವರು ಶನಿವಾರ ಜ.25 ರಂದು ಸಾಯಂಕಾಲ 6 ಗಂಟೆ ಒಳಗೆ ತಮ್ಮ ತಂಡದ ಹೆಸರು ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ, ಹೆಸರು ನೊಂದಾಯಿಸಲು ಮೊ.ನಂ: 9972767341, 8904199115, 7019516386, 7019008066 ಗೆ ಸಂಪಕರ್ಿಸಲು ಕೊರಲಾಗಿದೆ ಎಂದು ವ್ಹಾಲಿಬಾಲ್ ಪಂದ್ಯಾವಳಿ ಆಯೋಜಕ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 