76ನೇ ದಿನ ಕ್ವಿಟ್ ಬಲ್ಡೋಟಾ ಕಾರ್ಖಾನೆ ವಿರೋಧಿ ಧರಣಿ ಯಶಸ್ವಿ
76th day of Quit Baldota factory protest successful
ಕೊಪ್ಪಳ 14 : ನಗರಸಭೆ ಮುಂದುಗಡೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಹಮ್ಮಿಕೊಂಡಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ್ ಸುಮಿ, ಎಕ್ಸ್ ಇಂಡಿಯಾ, ತನುಷ್, ದೃವದೇಶ ಸೇರಿದಂತೆ ಅನೇಕ ಪರಿಸರ ಮಾರಕ ಕಾರ್ಖಾನೆ ವಿರೋಧಿ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹ 76 ದಿನ ಪೂರೈಸಿತು.
ಕ್ವಿಟ್ ಬಲ್ಡೋಟಾ ಹೆಸರಲ್ಲಿ ನಡೆಯುತ್ತಿರುವ ಹೋರಾಟವು ಕೇವಲ ಬಲ್ಡೋಟಾ ಅಲ್ಲದೇ ಮಾಲಿನ್ಯಕಾರಕ ಇತರೆ ಕಾರ್ಖಾನೆಗಳ ವಿಸ್ತರಣೆ ನಿಲ್ಲಿಸುವದು, ನದಿಗೆ ಬಿಡುತ್ತಿರುವ ಮಾಲಿನ್ಯವನ್ನು ತಡೆಯುವದು, ಬಲ್ಡೋಟಾ ವಶಪಡಿಸಿಕೊಮಡ ಭೂಮಿಯನ್ನು ಮರಳಿ ರೈತರಿಗೆ ಕೊಡುವದು ಸೇರಿದಂತೆ ವಿವಿಧ ಬೇಡಿಕೆಗಳ ಈ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪುರ ಪ್ರಮುಖರು, ಬಾಧಿತ ಹಳ್ಳಿಗಳ ರೈತರನ್ನು ಮತ್ತು ಇದುವರೆಗೆ ಬೆಂಬಲಕ್ಕೆ ಬಂದ ಸಂಘಟನೆಗಳ ಪದಾಧಿಕಾರಿಗಳ ಸಭೆ ಕರೆಯಲು ಯೋಜನೆ ಇದ್ದು, ಜಾತ್ರೆ ನಂತರ ಈ ಸಭೆ ನಡೆಸಲಾಗುತ್ತದೆ ಎಂದು ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ಧರಣಿಯಲ್ಲಿ ನಿವೃತ್ತ ಪ್ರಾಚಾರ್ಯರು ಬಿ.ಜಿ. ಕರಿಗಾರ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಎಸ್.ಬಿ. ರಾಜೂರು, ಶಂಭುಲಿಂಗಪ್ಪ ಹರಗೇರಿ, ನಿವೃತ್ತ ನ್ಯಾಯಾಂಗ ಇಲಾಖೆ ಅಧಿಕಾರಿ, ಜಿ. ಬಿ. ಪಾಟೀಲ್, ಮಂಜುನಾಥ ಜಿ. ಗೊಂಡಬಾಳ, ಗಂಗಾಧರ ಖಾನಾಪುರ, ಪ್ರಕಾಶಕ ಡಿ.ಎಂ. ಬಡಿಗೇರ, ರವಿ ಕಾಂತನವರ, ಮಹಾದೇವಪ್ಪ ಎಸ್. ಮಾವಿನಮಡು, ಗಂಗಮ್ಮ ಕುರುಗೋಡು, ಪಾಪುಸಾಬ ಮುಲ್ಲಾ, ಹನುಮಂತಪ್ಪ ಚಿಕೇನಕೊಪ್ಪ, ರಾಜ್ಯ ರೈತ ಸಂಘದ ಅಂದಪ್ಪ ಹುರಳಿ ಪಾಲ್ಗೊಂಡರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 