ರಾಜ್ಯಾದ್ಯಂತ 80 ಪ್ರಯೋಗಾಲಯಗಳ ಸ್ಥಾ ಪನೆ : ಸುಧಾಕರ್
ಬೆಂಗಳೂರು , ಜೂನ್ 30 : ಕೊರೊನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಲಿವೆ ಎಂದು ಮೊದಲೇ ನೀರಿಕ್ಷೆ ಮಾಡಲಾಗಿತ್ತು ಅದರಂತೆ ಮುನ್ನೆರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದೊಂದು ವಾರದಿಂದ ಕೊರೋನಾಸೋಮಕು ಪ್ರಕರಣಗಳು ಹೆಚ್ಚಳವಾಗಿದೆ. ಈ ಮೊದಲೇ ಜುಲೈ ನಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುವ ಬಗ್ಗೆ ಮಾಹಿತಿ ನೀಡಲಾಗಿತ್ತು ಹೀಗಾಗಿ ಯಾರೂ ಆತಂಕ ಪಡುಬೇಕಿಲ್ಲ ಎಂದರು.ಈ ಮೊದಲೇ ಸಭೆಯಲ್ಲಿ ಲ್ಯಾಬ್ ತೆರೆಯುವಂತೆ ಸೂಚಿಸಲಾಗಿತ್ತು. ಈಗ 80 ಲ್ಯಾಬ್ ಗಳನ್ನು ಆರಂಭಿಸಲಾಗಿದೆ ರಾಜ್ಯದಲ್ಲಿ ಎರಡು ಇದ್ದ ಲ್ಯಾಬ್ ಗಳ ಸಂಖ್ಯೆಯನ್ನು 80ಕ್ಕೆ ಏರಿಸಲಾಗಿದೆ ಎಂದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 