82 ವರ್ಷದ ಅಜ್ಜ, 75 ವರ್ಷದ ಅಜ್ಜಿಗೆ ನರೇಗಾ ಆಸರೆ
82-year-old grandfather, 75-year-old grandmother get support from NREGA
82 ವರ್ಷದ ಅಜ್ಜ, 75 ವರ್ಷದ ಅಜ್ಜಿಗೆ ನರೇಗಾ ಆಸರೆ
ಮುಂಡರಗಿ 25: ಇಳಿವಯಸ್ಸಿನಲ್ಲೂ ವೃದ್ಧ ದಂಪತಿ ಜೋಡಿಯೊಂದು ನರೇಗಾ ಯೋಜನೆಯ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯಲ್ಲಿ ಕೂಲಿಕಾರರಾಗಿ ಭಾಗವಹಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮುಂಡರಗಿ ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡವಾಡ ಗ್ರಾಮದ 82 ವರ್ಷದ ಶಂಕರ್ಪ ಕೂಬಿಹಾಳ, 74 ವರ್ಷದ ಶಂಕರಮ್ಮ ಕೂಬಿಹಾಳ ದಂಪತಿ ಈ ಇಳಿವಯದಲ್ಲೂ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಮುದಾಯ ಬದು ನಿರ್ಮಾಣ ಕಾಮಗಾರಿ, ನಾಲಾ ಹೂಳೆತ್ತುವುದು, ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಕಳೆದ ಸುಮಾರು ಹತ್ತು ವರ್ಷಗಳಿಂದ ಜತೆಯಾಗಿಯೇ ಭಾಗವಹಿಸಿ ಯುವಜನತೆ ನಾಚುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆ ಮೂಲಕ ನರೇಗಾ ಕೂಲಿ ಮೊತ್ತದಿಂದ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ತಮ್ಮ ಎರಡು ಎಕರೆ ಖುಷ್ಕಿ ಕೃಷಿಭೂಮಿಯಲ್ಲಿ, ಬೇರೆ ರೈತರ ಜಮೀನುಗಳಲ್ಲಿ ದುಡಿಯುವ ಈ ದಂಪತಿ ಬೇಸಿಗೆ ಕಾಲದಲ್ಲಿ ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಿ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ. ಈ ಇಳಿವಯದಲ್ಲೂ ಕುಗ್ಗದ ಉತ್ಸಾಹದೊಂದಿಗೆ ಈ ಜೋಡಿ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದು ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರನ್ನೂ ಮದುವೆ ಮಾಡಿ ಕೊಟ್ಟಿರುವ ಈ ಹಿರಿಯ ದಂಪತಿ ಎಲ್ಲ ಕೆಲಸಗಳಲ್ಲೂ ಜೊತೆಯಾಗಿಯೇ ಹೋಗುತ್ತಾರೆ. ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ. ನಿಮ್ಮ ಈ ಉತ್ಸಾಹದ ಗುಟ್ಟೇನು ಎಂದು ಪ್ರಶ್ನಿಸಿದರೆ ದಿನಂಪ್ರತಿ ಜೋಳದ ರೊಟ್ಟಿ ಊಟ, ನಿತ್ಯವು ಮೈ ಬಗ್ಗಿಸಿ ದುಡಿಯುವುದು ಕಾರಣ ಎಂದು ನಗುತ್ತಾರೆ. ಐವತ್ತು ಅರವತ್ತು ವಯಸ್ಸಿಗೆ ಜನರು ಆರೋಗ್ಯದ ವಿಚಾರದಲ್ಲಿ ಹೆಚ್ಚು ಹೈರಾಣಾಗುವ ಇಂದಿನ ದಿನಮಾನಗಳಲ್ಲಿ ಈ ದಂಪತಿಗಳ ಬಳಿ ಯಾವುದೇ ಕಾಯಿಲೆ ಸುಳಿದಿಲ್ಲ. ಕಿವಿಗಳು ಸ್ಪಷ್ಟವಾಗಿ ಕೇಳುತ್ತವೆ. ಕಣ್ಣುಗಳು ನಿಚ್ಚಳವಾಗಿ ಕಾಣಿಸುತ್ತವೆ. ಕೂಲಿ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ. ಆ ಮೂಲಕ ನರೇಗಾ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಇರುವ ಅರ್ಧ ಕೆಲಸ ಪೂರ್ಣ ಕೂಲಿ ಎಂಬ ನಿಯಮವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಯುವಕರು ನಾಚುವಂತೆ ಕಷ್ಟಪಟ್ಟು ಕೆಲಸ ನಿರ್ವಹಿಸಿ ನರೇಗಾ ಕೂಲಿಮೊತ್ತದಿಂದ ಇಳಿವಯಸ್ಸಿನಲ್ಲಿ ಯಾರನ್ನು ನೆಚ್ಚಿಕೊಳ್ಳದೆ ತಮ್ಮ ದುಡಿಮೆಯಿಂದ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಕೋಟ್ ಮುಂಡರಗಿ ತಾಲೂಕಿನಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಾ ಅನೇಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಗುಳೆ ಹೋಗುವುದನ್ನು ತಪ್ಪಿಸುವುದರ ಜೊತೆಗೆ ಇಂತಹ ಹಿರಿಯ ನಾಗರಿಕರು ಯೋಜನೆಯ ಕಾಮಗಾರಿ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವುದು ಮಾದರಿ.ವಿಶ್ವನಾಥ ಹೊಸಮನಿ, ಇಓ, ತಾಪಂ, ಮುಂಡರಗಿದುಡಿಮೆಯೇ ದುಡ್ಡಿನ ತಾಯಿ ರೀ. ಬ್ಯಾಸಗಿಯೊಳಗ ನಾವು ತಪ್ಪದ ನರೇಗಾ ಕಾಮಗಾರಿಯೊಳಗ ಭಾಗವಹಿಸ್ತೀವಿ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 