೮ ರಿಂದ ತಿರುಪತಿ ತಿಮ್ಮಪ್ಪನ ದರ್ಶನ ಪುನರಾರಂಭ
ತಿರುಮಲ, ಜೂನ್ ೫,ತಿರುಮಲದಲ್ಲಿ ಈ ತಿಂಗಳ ೮ ರಿಂದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಪ್ರಾಯೋಗಿಕವಾಗಿ ಪುನಃ ಪ್ರಾರಂಭಿಸುತ್ತಿದ್ದೇವೆ ಎಂದು ತಿರುಮಲ ತಿರುಪತಿ ದೇವಾಸ್ಥಾನದ ಕಾರ್ಯಕಾರಿ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಪ್ರಕಟಿಸಿದ್ದಾರೆ. ಅವರು ತಿರುಮಲದಲ್ಲಿಯ ಅನ್ನಮಯ್ಯ ಭವನದಲ್ಲಿ ಅಧಿಕಾರಿಗಳೊಂದಿಗೆ ದರ್ಶನ ವಿಧಿ ವಿಧಾನಗಳ ಬಗ್ಗೆ ಚರ್ಚೆ ನಡೆಸಿದರು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿ.. ಕೊರೊನಾ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಸ್ಥಗಿತಗೊಳಿಸಲಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರು ಎದುರುನೋಡುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳಿಂದ ಭಕ್ತಾಧಿಗಳಿಗೆ ದರ್ಶನ ಆರಂಭಿಸಲು ಒಪ್ಪಿಗೆ ಲಭಿಸಿರುವುದರಿಂದ ದರ್ಶನದ ಬಗ್ಗೆ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ..ತಿಮ್ಮಪ್ಪನ ದೇಗುಲದಲ್ಲಿ ಜ್ಯೇಷ್ಟಾಭಿಷೇಕಗಳು ಗುರುವಾರದಿಂದ ಆರಂಭಗೊಂಡಿವೆ ಎಂದು ಸಿಂಘಾಲ್ ಹೇಳಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 