ಲಂಡಿಹಳ್ಳದಲ್ಲಿ ಬೆಳೆದ ಗಿಡ ಗಂಟೆಗಳನ್ನು ತೆಗೆಯುವಂತೆ ಸೂಚಿಸಿದ- ಎ ಸಿ ಗಂಗಪ್ಪ
A.C. Gangappa suggested removing the bells growing in Landihalla
ಲಕ್ಷ್ಮೇಶ್ವರ 09: ಪುರಸಭೆ ವ್ಯಾಪ್ತಿಯಲ್ಲಿ ಬರುವ ಹಳ್ಳದಕೇರಿ ಮತ್ತು ಕೆಂಚಲಾಪುರ ಓಣಿಯಲ್ಲಿ ಹರಿಯುವ ಲಂಡಿಹಳ್ಳ ಮತ್ತು ಜೋನಹಳ್ಳದಲ್ಲಿ ಗಿಡ ಗಂಟಿಗಳು ಬೆಳೆದು ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ಗಿಡ ಗಂಟಿಗಳ ಅಡೆತಡೆಯಿಂದ ಬಹಳಷ್ಟು ಸಂಗ್ರಹವಾಗಿ ಮನೆಗಳಿಗೆ ನೀರು ನುಗ್ಗಿ ತೊಂದರೆ ಆಗುತ್ತಿರುವದನ್ನು ಸರಿಪಡಿಸುವಂತೆ ಮೊನ್ನೆಯ ದಿನ ಓಣಿಯ ಸಾರ್ವಜನಿಕರು ಹಾಗೂ ರೈತರು ಅಧಿಕಾರಿಗಳಿಗೆ ಆಗ್ರಹಿಸಿದ್ದರು ಇದಕ್ಕೆ ಸ್ಪಂದಿಸಿರುವ ಗದಗ ಜಿಲ್ಲಾ ಉಪವಿಭಾಗಧಿಕಾರಿಗಳಾದ(ಎ. ಸಿ)ಶ್ರೀ ಎಮ್.ಗಂಗಪ್ಪ ಅವರು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳಿಗೆ 2ದಿನಗಳ ಒಳಗೆ ಹಳ್ಳದಲ್ಲಿ ಬೆಳೆದಿರುವ ಗಿಡ ಗಂಟಿಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸುವಂತೆ ಸೂಚಿಸಿದರು ಒಂದು ವೇಳೆ 2 ದಿನದ ಒಳಗಾಗಿ ಸರಿಪಡಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಮತ್ತೆ 2 ದಿನದ ನಂತರ ಗಿಡ ಗಂಟಿ ತೆರವು ಕಾರ್ಯವನ್ನು ವೀಕ್ಷಣೆ ಮಾಡುತ್ತೇನೆ ಎಂದು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ತಿಳಿಸಿದರು. ಈ ಸಮಯದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದಗಲ್ಲ ಸೇರಿದಂತೆ ಇನ್ನೂ ಅನೇಕ ರೈತ ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 