ಮದುವಣಗಿತ್ತಿಯಂತೆ ಶೃಂಗಾರ ಗೊಂಡ ಕಾರವಾರ
A caravan decorated like a bride
ಕಾರವಾರ, 21 : ಕರಾವಳಿ ಉತ್ಸವ 2025, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಕಾರವಾರ ಕಡಲತೀರ ಮದುವಣಗಿತ್ತಿಯಂತೆ ಶೃಂಗಾರ ಗೊಂಡಿದೆ. ಮೈಸೂರು ಯುವ ದಸರಾಕ್ಕೆ ಹಾಕುವ ವೇದಿಕೆ, ಲೈಟಿಂಗ್ ವ್ಯವಸ್ಥೆಯನ್ನು ಶನಿವಾರ ರಾತ್ರಿಯೇ ಸಜ್ಜುಗೊಳಿಸಲಾಗಿದೆ.
ಸರ್ಕಾರಿ ಕಚೇರಿ ಗೋಡೆಗಳು ಸಂಸ್ಕೃತಿ, ಪರಿಸರ ಜಾಗೃತಿ ಚಿತ್ರಗಳಿಂದ ಅಲಂಕೃತವಾಗಿವೆ. ಎಂಟು ವರ್ಷಗಳ ಸುದೀರ್ಘ ಬಿಡುವಿನ ನಂತರ ಹತ್ತು ಕೋಟಿ ವೆಚ್ಚದಲ್ಲಿ, ಏಳು ದಿನಗಳ ಕಾಲ ಸಾಂಸ್ಕೃತಿಕ ಉತ್ಸವ, ಬಾಲಿವುಡ್ , ಸ್ಯಾಂಡಲ್ ವುಡ್ ಗಾಯಕರಿಂದ ಕಡಲತೀರದಲ್ಲಿ ಸಂಗೀತದ ಅಲೆ ಏಳಲಿದೆ. ಕಾರವಾರ ಹಾಗೂ ಜಿಲ್ಲೆಯ ಪ್ರವಾಸೋದ್ಯಮ ಮೈಚಳಿ ಬಿಟ್ಟು ಕೊಡವಿ ನಿಂತಿದೆ. ಕಾರವಾರದ ಬೀದಿಗಳು ರೋಮಾಂಚನ ಗೊಂಡಿವೆ. ಜಿಲ್ಲೆಯ ಯುವಜನ ಹುಚ್ಚೆದ್ದು ಉತ್ಸವಕ್ಕೆ ಕಾಯುತ್ತಿದ್ದಾರೆ.
ಪಕ್ಕದ ಗೋವಾ ರಾಜ್ಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಜನ ಉತ್ಸವ ವೀಕ್ಷಿಸಲು ಆಗಮಿಸತೊಡಗಿದ್ದಾರೆ. ಡಿಸೆಂಬರ್ 22 ರಂದು ಅಪರಾಹ್ನ 4 ಗಂಟೆಗೆ ಸುಭಾಷಚಂದ್ರ ವೃತ್ತದಿಂದ ಮಯೂರ ವರ್ಮ ವೇದಿಕೆಯ ವರೆಗೆ 14 ಕಲಾ ತಂಡಗಳಿಂದ ಮೆರವಣಿಗೆ ಮೂಲಕ ಚಾಲನೆ ಸಿಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರವಿವಾರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ , ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ಉದ್ಘಾಟನೆ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಹಿರಿಯ ಶಾಸಕ ದೇಶಪಾಂಡೆ, ಶಾಸಕ ಸೈಲ್, ಶಾಸಕ ಭೀಮಣ್ಣ ಮೊದಲ ದಿನ ಗಾಯಕ ಶಂಕರ ಮಹಾದೇವನ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 