ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
A grand Kannada Rajyotsava celebration in Betageri on November 1st
ಬೆಟಗೇರಿ 31: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ.
ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಾರೆ್ಪಣ ಸಮರೆ್ಣ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ ದೇವಿಯ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಯುವಕರು, ಕನ್ನಡಾಭಿಮಾನಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 