ಒಮಾನ್ ದೊರೆ ಗೌರವಾರ್ಥ ನಾಳೆ ದೇಶಾದ್ಯಂತ ಶೋಕಾಚರಣೆ
ನವದೆಹಲಿ, ಜ 12: ಒಮಾನ್ ನ ದೊರೆ ಸುಲ್ತಾನ್ ಖಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ (ನಾಳೆ ) ಒಂದು ದಿನದ ಶೋಕಾಚರಣೆ ಘೋಷಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
ಅವರ ಗೌರವಾರ್ಥವಾಗಿ ಜನವರಿ 13ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಮಾಡಲಾಗುವುದು ಭಾರತದಾದ್ಯಂತ ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಹಾರಿಸಲಾಗುವುದು ಆ ದಿನ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಗೃಹ ಸಚಿವಾಲ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸಚಿವಾಲಯ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಸಹ ಕಳುಹಿಸಿದೆ.
ಒಮಾನ್ ದೊರೆ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ದೊರೆ ನಿಜವಾಗಿ ಶಾಂತಿಯ ದ್ಯೋತಕವಾಗಿದ್ದರು ಎಂದೂ ಬಣ್ಣಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 