ಒಮಾನ್ ದೊರೆ ಗೌರವಾರ್ಥ ನಾಳೆ ದೇಶಾದ್ಯಂತ ಶೋಕಾಚರಣೆ
ನವದೆಹಲಿ, ಜ 12: ಒಮಾನ್ ನ ದೊರೆ ಸುಲ್ತಾನ್ ಖಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ (ನಾಳೆ ) ಒಂದು ದಿನದ ಶೋಕಾಚರಣೆ ಘೋಷಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
ಅವರ ಗೌರವಾರ್ಥವಾಗಿ ಜನವರಿ 13ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಮಾಡಲಾಗುವುದು ಭಾರತದಾದ್ಯಂತ ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಹಾರಿಸಲಾಗುವುದು ಆ ದಿನ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಗೃಹ ಸಚಿವಾಲ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸಚಿವಾಲಯ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಸಹ ಕಳುಹಿಸಿದೆ.
ಒಮಾನ್ ದೊರೆ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ದೊರೆ ನಿಜವಾಗಿ ಶಾಂತಿಯ ದ್ಯೋತಕವಾಗಿದ್ದರು ಎಂದೂ ಬಣ್ಣಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 