ಕವಿಗೋಷ್ಠಿ ಸಾಹಿತ್ಯದ ಶ್ರೀಮಂತಿಕೆಯ ಪ್ರತೀಕ
A poetry gathering is a symbol of the richness of literature.
ಹೂವಿನಹಡಗಲಿ 19: ಕವಿ ಸಮಯವಲ್ಲದ ಸಂದರ್ಭದಲ್ಲಿಯೂ ಕವಿಗೋಷ್ಠಿ ನಡೆಯುತ್ತಿರುವುದು ಸಾಹಿತ್ಯದ ಶ್ರೀಮಂತಿಕೆಯ ಪ್ರತೀಕವಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಫ್ರೊ.ಶಾಂತಮೂರ್ತಿ ಬಿ ಕುಲಕರ್ಣಿ ಹೇಳಿದರು.ಪಟ್ಟಣದ ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾಷಾ ಸಂಘದ ವತಿಯಿಂದ ಆಯೋಜಿಸಿದ್ದ ಕೃತಿಕಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕವನ-ಕವಿತೆಗಳ ಭಾವನೆಗಳ ರೂಪದಲ್ಲಿ ಹೊರಹೊಮ್ಮುತ್ತದೆ ಎಂದರು. ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಪಿ.ಎಂ. ಶಿವಪ್ರಕಾಶ್ ಮಾತನಾಡಿ,“ಕವಿಗಳು ಮರಣ ಹೊಂದಿದರೂ ಕಾವ್ಯಗಳು ಎಂದಿಗೂ ಸಾಯುವುದಿಲ್ಲ" ಕಾವ್ಯವೆಂಬುದು ಮಾನವ ಜೀವನದ ಭಾವನೆಗಳಿಗೆ ಕನ್ನಡಿ ಹಿಡಿಯುವ ಮಹತ್ವದ ಸಾಹಿತ್ಯ ಪ್ರಕಾರವಾಗಿದೆ.
ಸಮಾಜದ ನೋವು, ನಲಿವು, ಸಂಸ್ಕೃತಿ, ಪ್ರೀತಿ, ಮಾನವೀಯತೆ ಹಾಗೂ ಬದುಕಿನ ಮೌಲ್ಯಗಳನ್ನು ಕವಿತೆಗಳು ತಲೆ ತಲೆಮಾರುಗಳಿಂದ ಜೀವಂತವಾಗಿರಿಸುತ್ತಾ ಬಂದಿವೆ ಎಂದರು. ಪ್ರಾಸ್ತಾವಿಕವಾಗಿ ಸಹಾಯಕ ಪ್ರಾಧ್ಯಾಪಕಡಾ. ಅಶೋಕ ಈಡಿಗರ್ ಮಾತನಾಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷಡಾ.ಎಂ.ಪಿ.ಎಂ. ಮಂಜುನಾಥಸ್ವಾಮಿ ಮತ್ತು ಸಹಾಯಕ ಪ್ರಾಧ್ಯಾಪಕ ಎ.ಕೆ. ನಾಗರಾಜ್ ಇದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದಡಾ.ಹೆಚ್.ಪಿ. ರಮೇಶ ವಹಿಸಿದ್ದರು.ಕವಿಗಳು ಕವಿತೆ ವಾಚಿಸಿದರು.ಶಿಕ್ಷಕ ವಿದ್ಯಾರ್ಥಿಗಳಾದ ಕಡ್ಲಬಾಳ ಅನಿತ, ಶಿವಲೀಲಾ ಬಡಿಗೇರ್, ಎಸ್.ಚೈತ್ರ ಸಂಗಡಿಗರು,ಎಸ್.ಪಿ.ಅರ್ಿತ ಮತ್ತು ರಕ್ಷಿತಾ ತಂಬೂರಿ ಕಾರ್ಯಕ್ರಮವನ್ನು ನಿರ್ವಹಿಸಿದರು
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 