ಜುಲೈ 8 ರಂದು ಜಿಲ್ಲಾ ಕಾರಾಗೃಹದಲ್ಲಿ ಪಯಣ ತಂಡದಿಂದ ತಲ್ಕಿ ನಾಟಕ ಪ್ರದರ್ಶನ
A talkie play at the District Jail on 8th July
ಗದಗ 7: ರಾಜ್ಯದ ತುಂಬ ಪಯಣ ಸಂಸ್ಥೆ ಆಯೋಜಿಸುವ ತಲ್ಕಿ ನಾಟಕವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಜಿಲ್ಲಾ ಕಾರಾಗೃಹ ಗದಗ, ನಿರ್ಮಲ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಮುಂಡರಗಿ ಹಾಗೂ ಸೃಷ್ಠಿ ಸಂಕುಲ ಸಂಸ್ಥೆ ಗದಗ, ನವರಸ ಕಲಾಸಂಘ ಬೆಟಗೇರಿ ಇವುಗಳ ಸಹಯೋಗದಲ್ಲಿ ಜುಲೈ 8 ರಂದು ನಗರದ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಗೊಟಗೂಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಹಾಯಕ ಕುಲಸಚಿವ ಶಹಜಹಾನ ಮುದಕವಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಈರಣ್ಣ ರಂಗಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ. ಎಸ್.ಮಕಾನದಾರ, ಮುಂಡರಗಿಯ ಚಂದ್ರು ನಾವಿ ಭಾಗವಹಿಸಲಿದ್ದಾರೆ. ಸಿಂಧನೂರಿನ ಪಲ್ಲವಿ, ಬೆಂಗಳೂರಿನ ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ, ನಿರ್ಮಲಾ ತರವಾಡೆ, ಆದಿತ್ಯ ಬಾಂಡಗೆ, ಬಸವರಾಜ ನೆಲಜೇರಿ , ಗಣೇಶ ಮೇರವಾಡೆ, ಸವಿತಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜೈಲರ್ ಸುನಂದಾ ಈರಬಾಯಿಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 