ಕಾಶ್ಮೀರಕ್ಕೆ ಆಗಮಿಸಿದ ವಿವಿಧ ದೇಶಗಳ 15 ಸದಸ್ಯರ ತಂಡ
ಶ್ರೀನಗರ, ಜ 9 ವಿಶ್ವದ ವಿವಿಧ ದೇಶಗಳ 15 ಸದಸ್ಯರ ತಂಡ ಗುರುವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ, ಆಗಸ್ಟ್ 5ರಿಂದ ಗೃಹಬಂಧನದಲ್ಲಿರುವ ಮೂವರು ಮುಖ್ಯಮಂತ್ರಿಗಳು ಸೇರಿದಂತೆ ಇತರ ಮುಖ್ಯವಾಹಿನಿಯ ನಾಯಕರ ಕುರಿತು ಮಾಹಿತಿ ಕಲೆ ಹಾಕಿತು.
ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಇದು ಎರಡನೇ ಅಂತರಾಷ್ಟ್ರೀಯ ಗಣ್ಯರ ಭೇಟಿಯಾಗಿದೆ.
ಅಧಿಕೃತ ಮೂಲಗಳ ಪ್ರಕಾರ, ಈ ಗಣ್ಯರು ದೆಹಲಿಯಲ್ಲಿರುವ ವಿವಿಧ ದೇಶಗಳ ರಾಯಭಾರಿ ಕಚೇರಿಗಳಿಂದ ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇವರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜನಸಂಚಾರವಿರುವ ರಸ್ತೆ ಮೂಲಕ ಖಾಸಗಿ ಹೋಟೆಲ್ ಗೆ ಕರೆದೊಯ್ಯಲಾಯಿತು. ಈ ಹಿಂದೆ ಅಕ್ಟೋಬರ್ ನಲ್ಲಿ ಆಗಮಿಸಿದ್ದ ತಂಡವನ್ನು ಜನಸಂಚಾರವಿರದ ರಸ್ತೆಯಲ್ಲಿ ಸಾಗಿಸಲಾಗಿತ್ತು. ನಂತರ ಅವರಿಗೆ ಅಲ್ಲಿನ ಸುರಕ್ಷತಾ ವ್ಯವಸ್ಥೆ ಕುರಿತು ಮಾಹಿತಿ ನೀಡಲಾಯಿತು.
ಆದರೆ, ಅನೇಕ ವ್ಯಾಪಾರ ಸಂಸ್ಥೆಗಳ ನಾಯಕರು, ತಮ್ಮ ಸಂಘದ ನಾಯಕರನ್ನು ಗೃಹಬಂಧನಲ್ಲಿಟ್ಟಿರುವುದರಿಂದ ತಂಡವನ್ನು ಭೇಟಿ ಮಾಡಲು ನಿರಾಕರಿಸಿವೆ. ಆದರೆ, ಕೆಲ ಸಣ್ಣ ಸಂಘಟನೆಗಳು ಮತ್ತು ವ್ಯಕ್ತಿಗಳು ಭೇಟಿ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 