ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ಮೃತಪಟ್ಟ ಯುವತಿ; ನೇತ್ರ ದಾನ ಮಾಡಿ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ ಕುಟುಂಬ
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ.
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 