ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ಮೃತಪಟ್ಟ ಯುವತಿ; ನೇತ್ರ ದಾನ ಮಾಡಿ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ ಕುಟುಂಬ
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ.
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 