ಭ್ರಷ್ಟ ಪೊಲೀಸ್ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಬೆಂಗಳೂರು, ಮೇ 22,ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಿಗರೇಟ್ ವಿತರಕರು ಮತ್ತು ನಕಲಿ ಮಾಸ್ಕ್ ಮಾರಾಟಗಾರರಿಂದ ಕೊಟ್ಯಂತರ ರೂ. ಲಂಚ ಪಡೆದ ಆರೋಪದಡಿ ದಾಳಿ ನಡೆಸಲಾಗಿದೆ.ಸಹಕಾರ ನಗರದ ಎಸಿಪಿ ಪ್ರಭುಶಂಕರ್ ಮನೆ ಸೇರಿ ನಗರದ ಏಳು ಕಡೆ ಡಿಎಸ್ ಪಿ ರಾಜೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ.ಲಾಕ್ ಡೌನ್ ನಡುವೆ ಸಿಸಿಬಿಯ ಈ ಮೂವರು ಭ್ರಷ್ಟ ಅಧಿಕಾರಿಗಳು ಕೋಟಿ ಕೋಟಿ ಡೀಲ್ ನಡೆಸಿದ್ದರು. ಅಕ್ರಮವಾಗಿ ಸಿಗರೇಟ್ ಮಾರಾಟಕ್ಕೆ ಅನುಮತಿ ನೀಡಿ ಲಂಚ ಪಡೆದಿದ್ದರು. ಡೀಲ್ ವ್ಯವಹಾರ ಬಯಲಿಗೆ ಬರುತ್ತಿದ್ದಂತೆ ಮೂವರು ಸಿಸಿಬಿ ಅಧಿಕಾರಿಗಳನ್ನು ಅಮಾನತು ಮಾಡಿ, ಬಳಿಕ ಪ್ರಕರಣದ ತನಿಖೆಯನ್ನು ಎಸಿಬಿಗೆ ವರ್ಗಾಯಿಸಲಾಗಿತ್ತು.ಗುರುವಾರವಷ್ಟೇ ಲಂಚ ಪಡೆದ ಆರೋಪದಡಿ ಮೂವರು ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಮೂರು ಪ್ರತ್ಯೇಕ ಎಫ್.ಐ.ಆರ್ ದಾಖಲಿಸಿತ್ತು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 