ರೇವಂತ್ ರೆಡ್ಡಿ ಬಂಧನಕ್ಕೆ ಗುಲಾಂನಬೀ ಆಜಾದ್ ಖಂಡನೆ
ನವದೆಹಲಿ, ಮಾರ್ಚ್ 6, ಭ್ರಷ್ಟಾಚಾರ ಮತ್ತು ಅಕ್ರಮ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ ರಾಜ್ಯಸಭಾ ಸಂಸದ ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ಸರ್ಕಾರ ಬಂಧಿಸಿರುವ ಕ್ರಮವನ್ನು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಖಂಡಿಸಿ, ರೆಡ್ಡಿ ಬಿಡುಗಡೆಗೆ ಒತ್ತಾಯಿಸಿದ್ದಾರೆ.ಈ ವಿಷಯದಲ್ಲಿ ತೆಲಂಗಾಣ ಸರ್ಕಾರದ ಹಸ್ತಕ್ಷೇಪ ತೀವ್ರ ಖಂಡನೀಯ ಎಂದು ಗುಲಾಂ ನಬೀ ಆಜಾದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ರಾಜ್ಯ ಸರ್ಕಾರದ ಕ್ರಮವನ್ನು ಬಲವಾಗಿ ಖಂಡಿಸುತ್ತೇನೆ. ರೇವಂತ್ ರೆಡ್ಡಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಕಾನೂನುಬಾಹಿರ ಚಟುವಟಿಕೆ ಮತ್ತು ಕೃತ್ಯಗಳಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಸರ್ಕಾರ ಕೂಡಲೇ ಬಂಧಿಸಬೇಕು.’ ಎಂದು ಗುಲಾಂ ನಬೀ ಆಜಾದ್ ಒತ್ತಾಯಿಸಿದ್ದಾರೆ. ಕಾನೂನು ಬಾಹಿರ ನಿರ್ಮಾಣದಲ್ಲಿ ತೊಡಗಿರುವವರು ಮತ್ತು ಸರ್ಕಾರದ ನಡುವಿನ ಒಳ ಒಪ್ಪಂದವನ್ನು ರೆಡ್ಡಿ ಬಂಧನ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 