ಬಿಲ್ಟ ಸರ್ಕಲ್ ಬಳಿ ಅಪಘಾತ: ಅಪಾಯದಿಂದ ಪಾರಾದ ನೌಕಾನೆಲೆ ಸಿಬ್ಬಂದಿ
Accident near Bilta Circle: Naval personnel escape danger
ಕಾರವಾರ 05: ನಗರದ ಬಿಲ್ಟ್ ಸರ್ಕಲ್ ಬಳಿ ಕಾರ್ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನೌಕನೆಲೆ ಸಿಬ್ಬಂದಿ ಗುನಾಜಿತ್ ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿ ಯಿಂದ ಕಾರವಾರ ನಗರ ಪ್ರವೇಶಿಸುತ್ತಿದ್ದ ಸವಣೂರು ಬಸ್ ಗೆ ಕಾರವಾರ ಪ್ರವೇಶ ದ್ವಾರ ಬಿಲ್ಟ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಬರುತ್ತಿದ್ದ ಕಾರ್ ಬಸ್ ನ ಮಧ್ಯಭಾಗಕ್ಕೆ ಡಿಕ್ಕಿ ಹೊಡೆದಿದೆ. ಕಾರ್ ನ ಏರ್ ಬ್ಯಾಗ್ ಓಪನ್ ಆದ ಕಾರಣ ಕಾರ್ ಚಾಲಕ ( ನೌಕಾನೆಲೆ ಸಿಬ್ಬಂದಿ) ಅಪಾಯದಿಂದ ಪಾರಾಗಿದ್ದಾರೆ.
ಕಾರ್ ನಲ್ಲಿದ್ದ ಅವರ ಮಗ ಹಾಗೂ ಕುಟುಂಬ ಸಹ ಅಪಾಯದಿಂದ ಪಾರಾಗಿದೆ. ಕಾರ್ ಮುಂಭಾಗ ನುಜ್ಜುಗೊಜ್ಜಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿ ತಿಳಿಗೊಳಿಸಿ ,ಪ್ರಕರಣ ದಾಖಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 