ಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಆಕಸ್ಮಿಕ ದಾಳಿ: 5 ಮಕ್ಕಳ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲು
Accidental raid to eradicate child labor in Bellary: 5 children rescued, case registered against own
ಬಳ್ಳಾರಿ 22: ನಗರದ ವಿವಿಧ ರಸ್ತೆಗಳು ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಸೋಮವಾರ ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳು ಜಂಟಿಯಾಗಿ ಆಕಸ್ಮಿಕ ದಾಳಿ ನಡೆಸಿ, ಒಟ್ಟು ಐದು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈಲ್ಡ್ ಲೈನ್ ಸಂಘಟನೆಯ ಜಂಟಿ ಸಹಯೋಗದೊಂದಿಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಬಳ್ಳಾರಿ ನಗರದ ಪ್ರಮುಖ ವಲಯಗಳಾದ ಸಂಗಮ್ ಸರ್ಕಲ್, ರಾಧಿಕಾ ಟಾಕೀಸ್ ರಸ್ತೆ, ವಡ್ಡರ ಬಂಡೆ ಏರಿಯಾ, ಕಣೇಕಲ್ ಬಸ್ ನಿಲ್ದಾಣ ಹಾಗೂ ಆಂದ್ರಾಳ್ ಭಾಗಗಳಲ್ಲಿರುವ ಪಂಚರ್ ಶಾಪ್, ಟಿಂಕರಿಂಗ್ ಶಾಪ್, ಗ್ಯಾರೇಜ್, ವುಡ್ ವರ್ಕ್ಸ ಮತ್ತು ಮೆಕ್ಯಾನಿಕ್ ಶಾಪ್ಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿತು. ತಾಲೂಕು ಮಟ್ಟದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಅಡಿಯಲ್ಲಿ ನೇಮಕವಾಗಿರುವ ನೀರೀಕ್ಷಕರ ಟಾಸ್ಕ್ ಫೋರ್ಸ್ ಸಮಿತಿಯ ನೇತೃತ್ವದಲ್ಲಿ ಈ ಕ್ರಮ ಜರುಗಿಸಲಾಗಿದೆ. ದಾಳಿಯ ವೇಳೆ ಕೆಲಸದಲ್ಲಿ ತೊಡಗಿದ್ದ ಐದು ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ. ಮಕ್ಕಳ ವಯಸ್ಸಿನ ಅಧಿಕೃತ ದಾಖಲಾತಿಗಳನ್ನು ಪರೀಶೀಲಿಸಿದ ನಂತರ, ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಮಾಲೀಕರ ವಿರುದ್ಧ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಅಂಗಡಿ ಮತ್ತು ಉದ್ದಿಮೆಗಳ ಮಾಲೀಕರಿಗೆ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳದಂತೆ ಎಚ್ಚರಿಕೆ ನೀಡಿ, ಜಾಗೃತಿ ಪೋಸ್ಟರ್ಗಳನ್ನು ಹಂಚಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪತಹಶೀಲ್ದಾರ್ ಮಂಜುನಾಥ್, ಕಾರ್ಮಿಕ ನೀರೀಕ್ಷಕ (2ನೇ ವೃತ್ತ) ರಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಎಸ್.ಜೆ.ಪಿ.ಯು ನ ಲಲಿತಮ್ಮ, ಮಕ್ಕಳ ರಕ್ಷಣಾಧಿಕಾರಿಗಳಾದ ವಲಿಬಾಷಾ ಮತ್ತು ಹೊನ್ನೂರ್ಪ, ಕಂದಾಯ ಇಲಾಖೆಯ ಆಡಳಿತಾಧಿಕಾರಿ ಮಧುಸೂದನ್, ಆರೋಗ್ಯ ಇಲಾಖೆಯ ಮುಸ್ತಾಖ್ ಅಹಮ್ಮದ್, ಚೈಲ್ಡ್ ಲೈನ್ ಸಿಬ್ಬಂದಿ ಸುಶೀಲ ಹಾಗೂ ರೀಚ್ ಸಂಸ್ಥೆಯ ಹನುಮಂತಪ್ಪ ಹಾಜರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 