ಕಳ್ಳತನ ಆರೋಪಿ ಬಾವಿಗೆ ಬಿದ್ದು ಸಾವು
ಬೆಂಗಳೂರು, ಏ.11,ನಗರದ ಹೊರವಲಯದ ಹೊಸಕೋಟೆಯ ನಡುವತ್ತಿಯ ಬಾರ್ನಲ್ಲಿ ಮದ್ಯ ಕಳ್ಳತನ ಮಾಡಿದ್ದ ಆರೋಪಿಯೊಬ್ಬ ಪೊಲೀಸ್ ಮಹಜರು ವೇಳೆ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.ಮೃತಪಟ್ಟವರನ್ನು ನಡುವತ್ತಿ ಗ್ರಾಮದ ಮುನಿಪಿಳ್ಳಪ್ಪ (52)ಎಂದು ಗುರುತಿಸಲಾಗಿದೆ. ಮುನಿಪಿಳ್ಳಪ್ಪ ನಡುವತ್ತಿಯ ಬಾರ್ವೊಂದರಲ್ಲಿ ಮದ್ಯ ಕಳ್ಳತನ ಮಾಡಿ ಪರಾರಿಯಾಗಿದ್ದ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತಿರುಮಶೆಟ್ಟಿಹಳ್ಳಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿ ಸ್ಥಳ ಮಹಜರ್ ಮಾಡಲು ನಿನ್ನೆ ಕರೆದೊಯ್ದಿದ್ದರು. ಆರೋಪಿ ಕಳವು ಮಾಡಿದ್ದ ಮದ್ಯವನ್ನು ಬಾವಿಯ ಬಳಿ ಬಚ್ಚಿಟ್ಟ ಹಿನ್ನೆಲೆ ಅಲ್ಲಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಆದರೆ ಆರೋಪಿಯ ಸಂಬಂಧಿಕರು ಪೊಲೀಸರು ಮದ್ಯ ಕಳ್ಳತನ ಮಾಡಿದಕ್ಕೆ ಮುನಿಪಿಳ್ಳಪ್ಪನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು ಅದರ ನೋವು ತಾಳಲಾರದೇ ಆತ ಸಾವನ್ನಪ್ಪಿದ್ದು, ಅದನ್ನು ಮುಚ್ಚಿಹಾಕಲು ಪೊಲೀಸರು ಮುನಿಪಿಳ್ಳಪ್ಪ ಬಾವಿಗೆ ಬಿದ್ದು ಸಾವನಪ್ಪಿದ್ದಾನೆ ಎಂದು ಸುಳ್ಳು ಹೇಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 