ಪೊಲೀಸರಿಗೆ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದ ಆರೋಪಿ ತಜಗಾಂವ್ ನಲ್ಲಿ ಬಂಧನ
Accused who threatened to kill police officer, attacked, arrested in Tajgaon
ಕಾರವಾರ 22 : ಹಳಿಯಾಳದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ , ಧಮ್ಕಿ ಹಾಕಿ ಪರಾರಿಯಾಗಿದ್ದ ಆರೋಪಿ ಮಂಜುನಾಥ್ ಅಲಿಯಾಸ್ ಮಚ್ಚ ಮಂಜಾ ಮಹಾರಾಷ್ಟ್ರದ ಸಾಂಗ್ಲಿಯ ತಜಗಾಂವ್ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ಹಳಿಯಾಳ ನ್ಯಾಯಾಧೀಶರ ಎದುರು ಹಾಜರುಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳಿಯಾಳ ಮೌರ್ಯ ಬಾರ್ ಎದುರು ಪೊಲೀಸರಿಗೆ ಜೀವ ಬೆದರಿಕೆ ಹಾಕಿ, ಹಲ್ಲೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿ, ತಲೆಮರೆಸಿಕೊಂಡಿದ್ದ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದ, ಅವಾಚ್ಯ ಶಬ್ದದಿಂದ ಬೈದಿದ್ದ ವಿಡಿಯೋ ರಾಜ್ಯದ ಬಹುತೇಕ ಕಡೆ ವೈರಲ್ ಆಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಳಿಯಾಳ ಪಿಎಸ್ ಐ ಒಬ್ಬರನ್ನು ಅಮಾನತ್ ಮಾಡಿ, 8 ಜನ ಸಿಬ್ಬಂದಿಗಳನ್ನು ಭಟ್ಕಳ, ಮುರುಡೇಶ್ವರ ಠಾಣೆಗಳಿಗೆ ವರ್ಗಾವಣೆ ಮಾಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 