ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಎಸ್.ಎಸ್. ಕೂಡಲಮಠ ಶಾಲೆಯ ವಿದ್ಯಾರ್ಥಿಗಳ ಸಾಧನೆ
Achievements of S.S. Koodalamatha School students in the State Award examination
ಲಕ್ಷ್ಮೇಶ್ವರ 13: ಸಮೀಪದ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡಲಮಠ ಮಾಧ್ಯಮಿಕ ಶಾಲೆಯ 20 ಸ್ಕೌಟ್ಸ್ ಹಾಗೂ 6 ಗೈಡ್ಸ್ ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಭವನದಲ್ಲಿ ನಡೆದ ರಾಜ್ಯ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳು ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು. ಶಾಲೆಯ ವಿದ್ಯಾರ್ಥಿ ಕುಮಾರ ಮಲ್ಲಿಕಾರ್ಜುನ ಪಿ. ಕಾಳಪ್ಪನವರ ಅವರು ಗದಗ ಜಿಲ್ಲೆಯ ಪ್ರತಿನಿಧಿಯಾಗಿ ಪ್ರಶಸ್ತಿ ಸ್ವೀಕರಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ರಾಜ್ಯ ಪುರಸ್ಕಾರ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಕೆ.ಆರ್. ಲಮಾಣಿ ಹಾಗೂ ಶ್ರೀಮತಿ ಪಿ.ಸಿ. ಹಿರೇಮಠ ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಬಳಿಗಾರ, ಕಾರ್ಯದರ್ಶಿ ಸಿ.ಎಂ. ರಾಗಿ, ಮುಖ್ಯೋಪಾಧ್ಯಾಯ ಸಿ.ಬಿ. ಮೊಗಲಿ, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಹಳೆಯ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 