ಕಾನೂನು ಪ್ರಕಾರ ಸ್ಪೀಕರ್ ಅವರಿಂದ ಕ್ರಮ'
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರು ಇಂದು ಸಂಜೆ ಆರು ಗಂಟೆಯೊಳಗೆ ಹಾಜರಾಗಿ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸುವಂತೆ ಸುಪ್ರೀಂಕೋಟರ್್ ಸೂಚಿಸಿದೆ. ಅದರಂತೆ ಶಾಸಕರು ಇಂದು ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸ್ಪೀಕರ್ ಅವರು ಸಂವಿಧಾನದ 192 ವಿಧಿ ಮತ್ತು ಶೆಡ್ಯೂಲ್ಡ್ 10ರ ಪ್ರಕಾರ ಯಾವೆಲ್ಲಾ ಸಾಧ್ಯತೆಗಳಿವೆಯೋ ಅವೆಲ್ಲವನ್ನೂ ಪರಿಶೀಲಿಸಲಿದ್ದಾರೆ. ಅವರು ಸಾಕಷ್ಟು ಕಾನೂನು ತಿಳುವಳಿಕೆ ಇರುವವರು. ಕಾನೂನಿಗೆ ಅನುಗುಣವಾಗಿ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 