ನಟ ದರ್ಶನ್ ಗನ್ ಪರವಾನಗಿ ತಾತ್ಕಾಲಿಕ ಅಮಾನತ್ತು
Actor Darshan Gunn's license temporarily suspended
ಬೆಂಗಳೂರು 21: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರ ಬಳಿಯಿರುವ ಗನ್ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದ್ದಾರೆ.
ಈ ಹಿಂದೆಯೇ ಪೊಲೀಸರು ದರ್ಶನ್ರ ರದ್ದು ಗನ್ ಪರವಾನಗಿ ಮಾಡುವುದಾಗಿ ಹೇಳಿ, ಈ ಸಂಬಂಧ ನೋಟಿಸ್ ನೀಡಿದ್ದರು. ಆದರೆ ದರ್ಶನ್, ನಾನೊಬ್ಬ ಸೆಲೆಬ್ರಿಟಿ ಆಗಿದ್ದೇನೆ. ಭದ್ರತೆಯ ದೃಷ್ಟಿಯಿಂದ ನನಗೆ ಗನ್ ಅವಶ್ಯಕತೆ ಇದೆ. ನಾನು ಹೋದ ಕಡೆ ಬಂದ ಕಡೆ ಸಾಕಷ್ಟು ಜನ ಸೇರುತ್ತಾರೆ. ಈ ವೇಳೆ ನನ್ನ ಆತ್ಮರಕ್ಷಣೆಗೆ ಗನ್ ಬೇಕು ಎಂದು ಪೊಲೀಸರಿಗೆ ಪತ್ರ ಬರೆದಿದ್ದರು.
ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ದರ್ಶನ್ ಅವರ ಗನ್ ಲೈಸೆನ್ಸ್ನ್ನು ತಾತ್ಕಾಲಿಕ ಮಾನತ್ತಿನಲ್ಲಿಡಲು ನಿರ್ಧರಿಸಿ ದರ್ಶನ್ ಅವರು ತನ್ನ ಬಳಿಯಿರುವ ಎರಡು ಗನ್ ಆರ್ ಆರ್ ನಗರ ಪೊಲೀಸರಿಗೆ ಸರಂಡರ್ ಮಾಡಬೇಕು, ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಗನ್ ಇಟ್ಟುಕೊಳ್ಳುವಂತಿಲ್ಲ ಎಂದು ಪೊಲೀಸರು ಸೂಚನೆ ನೀಡಿದ್ದಾರೆ
ಪೊಲೀಸರ ಸೂಚನೆ ಮೇರೆಗೆ ತಮ್ಮ ಸಹಾಯಕನ ಮೂಲಕ ದರ್ಶನ್ ಲೈಸೆನ್ಸ್ ಗನ್ ಆರ್ ಆರ್ ನಗರ ಠಾಣೆಗೆ ಸರಂಡರ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 