ನಟ ಶಿವರಾಜ್ಕುಮಾರ್ ನಟನೆಯ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ದಿನ ನಿಗದಿ
Actor Shivrajkumar starrer 'Bhairati Ranagal' OTT release date set
ಬೆಂಗಳೂರು 24: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ದಿನ ನಿಗದಿಯಾಗಿದೆ.
ನಟ ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಆ ಮೂಲಕ ʼಮಫ್ತಿʼ ಪ್ರೀಕ್ವೆಲ್ಗೂ ಪ್ರೇಕ್ಷಕರು ಜೈಕಾರ ಹಾಕಿದ್ದರು
ನರ್ತನ್ ನಿರ್ದೇಶನದ ʼಭೈರತಿ ರಣಗಲ್ʼ ನ.15 ರಂದು ರಿಲೀಸ್ ಆಗಿತ್ತು. ಕಪ್ಪು ಕೋಟ್ ತೊಟ್ಟು ವಕೀಲನಾಗಿ ಮತ್ತು ಮಾಸ್ ಹೀರೋ ಆಗಿ ಅಬ್ಬರಿಸಿದ ಎರಡು ಶೇಡ್ ನಲ್ಲಿ ಸೆಂಚುರಿ ಸ್ಟಾರ್ ಮಿಂಚಿದ್ದರು. ಸಿನಿಮಾ ಥಿಯೇಟರ್ನಲ್ಲಿ ಹಿಟ್ ಆಗುವುದರ ಜತೆಗೆ ಬಾಕ್ಸಾಫೀಸ್ನಲ್ಲೂ ಸಮಾಧಾನ ತರುವ ಬ್ಯುಸಿನೆಸ್ ಮಾಡಿತ್ತು. ಅಂದಾಜಿನ ಪ್ರಕಾರ ಚಿತ್ರ 20 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
ಸಿನಿಮಾದಲ್ಲಿ ದೇವರಾಜ್, ಅವಿನಾಶ್,ರಾಹುಲ್ ಭೋಸ್, ರುಕ್ಮಿಣಿ ವಸಂತ್ ಮುಂತಾದವರು ನಟಿಸಿದ್ದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ ಭೈರತಿ ರಣಗಲ್ ಚಿತ್ರಕ್ಕಿದೆ.
ಸಿನಿಮಾ ರಿಲೀಸ್ ಆಗಿ 40 ದಿನಕ್ಕೆ ʼಭೈರತಿ ರಣಗಲ್ʼ ಓಟಿಟಿ ಅಖಾಡಕ್ಕೆ ಕಾಲಿಡಲಿದೆ. ಡಿ.25 ರಂದು ʼಭೈರತಿ ರಣಗಲ್ʼ ಅಮೇಜಾನ್ ಪ್ರೈಮ್ನಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಆ ಮೂಲಕ ಕ್ರಿಸ್ಮಸ್ ಹಾಲಿಡೇಗೆ ಸಿನಿಮಂದಿಗೆ ಭರ್ಜರಿ ಮನರಂಜನೆ ಸಿಗಲಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 