ಇಂದು ಐಟಿ ವಿಚಾರಣೆಗೆ ಹಾಜರಾಗಲಿರುವ ನಟಿ ರಶ್ಮಿಕಾ ಮಂದಣ್ಣ ಕುಟುಂಬ
ಬೆಂಗಳೂರು, ಜ. 21, ಕಿರಿಕ್ ಪಾರ್ಟಿ ಚಿತ್ರ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಇತ್ತೀಚೆಗೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಶ್ಮಿಕಾ ಕುಟುಂಬ ಇಂದು ವಿಚಾರಣೆಗೆ ಹಾಜರಾಗಲಿದೆ. ಇದೇ ತಿಂಗಳ 16ರಂದು 10 ಜನರ ಐಟಿ ಅಧಿಕಾರಿಗಳ ತಂಡ ಕೊಡಗಿನ ವಿರಾಜಪೇಟೆ ಸೇರಿ ರಶ್ಮಿಕಾ ಅವರಿಗೆ ಸೇರಿದ ಎರಡು ಕಡೆ ದಾಳಿ ನಡೆಸಿತ್ತು. ಸುಮಾರು ಎರಡು ದಿನ ರಶ್ಮಿಕಾ ನಿವಾಸದ ಮೇಲೆ ದಾಳಿ ನಡೆಸಿದ ತಂಡ ಕೆಲ ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ರಶ್ಮಿಕಾ ಹಾಗೂ ಕುಟುಂಬದವರು ವಿಚಾರಣೆಗೆ ಹಾಜರಾಗಲಿದ್ದಾರೆ. ಇಂದು ಬೆಳಗ್ಗೆ 11:30ಕ್ಕೆ ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ರಶ್ಮಿಕಾ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಮಂದಣ್ಣ ಈಗಾಗಲೇ ಮೈಸೂರಿಗೆ ತೆರಳಿದ್ದು, ನಟಿ ರಶ್ಮಿಕಾ ಹೈದ್ರಾಬಾದ್ನಿಂದ ಬಂದು ವಿಚಾರಣಾ ಸಮಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 