ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
Adhyaya-Katakadhonda for all-round development of the field
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ-ಕಟಕಧೋಂಡ
ಚಡಚಣ 03: ಪಟ್ಟಣವನ್ನು ಮಾದರಿಯನ್ನಾಗಿಸುವದರ ಜೋತೆಗೆ ಕ್ಷೇತ್ರದ ಸರ್ವಾಂಗೀಣ ಅಭೀವೃದ್ಧಿಗೆ ಪ್ರಥಮ ಆದ್ಯತೆ ನೀಡುವೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.
ಪಟ್ಟಣದ ಹೊರ ವಲಯದಲ್ಲಿ ಚಡಚಣ- ಉಮದಿ ರಸ್ತೆ ಡಾಂಬರೀಕರಣ ಹಾಗೂ ಚಡಚಣದಿಂದ ಶಿರಾಡೋಣದ ವರೆಗಿನ ರಸ್ತೆ ಸುಧಾರಣೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಚಡಚಣದಿಂದ ಉಮದಿವರೆಗಿನ ರಸ್ತೆ ದುರಸ್ತಿ 5 ಕೋಟಿ ಹಾಗೂ ಚಡಚಣ-ಶಿರಾಡೋಣವರೆಗೆ ಸುಮಾರು 4 ಕೋಟಿ ವೆಚ್ಚದಲ್ಲಿ ರಸ್ತೆ ಸುದಾರಣೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಮಾರ್ಚ ಅಂತ್ಯದವರೆಗೆ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ. ಇದಲ್ಲದೆ ಸುಮಾರು 4 ಕೋಟಿ ವೆಚ್ಚದಲ್ಲಿ ಚಡಚಣ-ಶಿರಾಡೋಣ ರಸ್ತೆ ಸುದಾರಣಾ ಕಾಮಗಾರಿಯನ್ನು ಕೈಕೊಳ್ಳಗಾಗುತ್ತಿದೆ ಎಂದ ಅವರು,. ಪಟ್ಟಣದಲ್ಲಿ ಮಿನಿ ವಿದಾನಸೌದ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿ ಕೈಗೊಳ್ಳಲಾಗುವದು,
ಬಸ್ ಡಿಪೋ, ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಕ್ರಮ ಕೈಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಚಡಚಣ ಮಂಡಲ ಅಧ್ಯಕ್ಷ ಆರಿ್ಡ.ಹಕ್ಕೆ ಮುಖಂಢರಾದ,ಬಾಬುಗೌಡ ಪಾಟೀಲ, ರವಿದಾಸ ಜಾಧವ, ಪರಮಾನಂದ ಕೋಳಿ, ದ್ಯಾವಪ್ಪ ಪಾಟೀಲ,ರಫೀಕ ಮಕಾನದಾರ, ಸಂಗಪ್ಪ ಭಂಡರಕವಟೆ, ಡಾ.ವಿ.ಎಸ್.ಪತ್ತಾರ, ಪ,ಪಂ ಮುಖ್ಯಾಧಿಕಾರಿ ಪೂಜಾರಿ,ಸದಸ್ಯ ಪ್ರಕಾಶಗೌಡ ಪಾಟೀಲ,ಪಟ್ಟಣ ಪಂಚಾಯ್ತಿ ಸದಸ್ಯರು, ಲೋಕೊಪಯೋಗಿ ಇಲಾಖೆ ಅಧಿಕಾರಿಗಳು
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 