ಎಂಐಎ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಕೋರ್ಟ್ ಗೆ ಹಾಜರು
ಮಂಗಳೂರು, ಜನವರಿ 23,ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣದ ಆರೋಪಿ ಆದಿತ್ಯ ರಾವ್ ನನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು.ಆದಿತ್ಯ ರಾವ್ ಅವರ ವಿರುದ್ಧ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಸ್ಫೋಟಕ ಇಟ್ಟಿದ್ದಟ್ಟ ಗುರುತರ ಆರೋಪ ಹೊರಿಸಲಾಗಿದೆ. ಬುಧವಾರ ಬೆಳಿಗ್ಗೆ ಅವರು ಬೆಂಗಳೂರು ಪೊಲೀಸರ ಮುಂದೆ ಶರಣಾದರು, ನಂತರ ಅವರನ್ನು ತಂಡವು ಮಂಗಳೂರಿಗೆ ಕರೆತರಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಪಿ ಎಸ್ ಹರ್ಷ ಸುದ್ದಿಗಾರರ ಜೊತೆ ಮಾತನಾಡಿ,' ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಸಾಧನ ಇರಿಸಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ. ಅವರನ್ನು ಮೊದಲ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಎಲ್ಲಾ ಸಾಕ್ಯ, ಆಯಾಮಗಳಿಂದಲೂ ನಾವು ಆರೋಪಿ ತನಿಖೆ ಮಾಡುತ್ತೇವೆ ಬೆಂಗಳೂರು ನ್ಯಾಯಾಲಯವು ನಮಗೆ ಕಾಲವಕಾಶ ನೀಡಿದೆ ಮತ್ತು ನಾವು ಅವರನ್ನು ಆರನೇ ಜೆಎಂಎಫ್ಸಿ ಮುಂದೆ ಹಾಜರುಪಡಿಸುತ್ತೇವೆ. ಯಾವುದೇ ಹೊಸ ಸಾಕ್ಷಿ, ಪುರಾವೆ ದೊರಕಿದರೆ ನಂತರ ತಿಳಿಸುವುದಾಗಿಯೂ ಹೇಳಿದರು. ಕೆಲವು ಕಾನೂನು ಅನುಸರಿಸಬೇಕಾದ ಕಾರಣ ಅವರನ್ನು ಪ್ರಶ್ನಿಸುವ ಅವಕಾಶ ಸದ್ಯಕ್ಕೆ ಇಲ್ಲ ಎಂದು ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 