ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಿರೇಕೆರೂರು, ಜೂನ್ 29: ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಪರೀಕ್ಷಾ ಕೊಠಡಿಗಳು, ಸಾಮಾಜಿಕ ಅಂತರ ಪರಿಶೀಲಿಸಿದ ಸಚಿವರು ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದರು.ಯಾವುದೇ ಮಕ್ಕಳು ಕೋವಿಡ್ನಿಂದ ಭಯಪಡಬಾರದು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು.
ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು. ಒಂದು ವೇಳೆ ವಿದ್ಯಾರ್ಥಿಗಳಲ್ಲಿ ಏನಾದರೂ ಆರೋಗ್ಯದ ಸಮಸ್ಯೆ ಕಂಡುಬಂದಲ್ಲಿ ಮೇಲ್ವಿಚಾರಕರು ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳು ಸಹ ಮೇಲ್ವಿಚಾರಕರಿಗೆ ತಿಳಿಸಬೇಕು ಎಂದರು.ವಿದ್ಯಾರ್ಥಿಗಳು ಅಂಜದೇ ಹೆದರದೇ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷೆ ಮುಗಿದ ಬಳಿಕ ಗುಂಪಾಗಿ ಓಡಾಡುವುದಾಗಲೀ ಒಂದೆಡೆ ಸೇರುವುದಾಗಲೀ ಮಾಡಬಾರದು. ನೇರವಾಗಿ ತಮ್ಮ ನಿವಾಸಗಳಿಗೆ ಅಥವಾ ತಂಗಿರುವ ಸ್ಥಳಗಳಿಗೆ ಸಾಮಾಜಿಕ ಅಂತರದಲ್ಲಿಯೇ ತೆರಳಬೇಕು. ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಎಂದು ಸೂಚಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 