ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಿರೇಕೆರೂರು, ಜೂನ್ 29: ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಹಿರೇಕೆರೂರಿನ ಕೆ.ಎಸ್.ಪಾಟೀಲ್ ವಿದ್ಯಾಸಂಸ್ಥೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಪರೀಕ್ಷಾ ಕೊಠಡಿಗಳು, ಸಾಮಾಜಿಕ ಅಂತರ ಪರಿಶೀಲಿಸಿದ ಸಚಿವರು ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದರು.ಯಾವುದೇ ಮಕ್ಕಳು ಕೋವಿಡ್ನಿಂದ ಭಯಪಡಬಾರದು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು.
ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು. ಒಂದು ವೇಳೆ ವಿದ್ಯಾರ್ಥಿಗಳಲ್ಲಿ ಏನಾದರೂ ಆರೋಗ್ಯದ ಸಮಸ್ಯೆ ಕಂಡುಬಂದಲ್ಲಿ ಮೇಲ್ವಿಚಾರಕರು ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳು ಸಹ ಮೇಲ್ವಿಚಾರಕರಿಗೆ ತಿಳಿಸಬೇಕು ಎಂದರು.ವಿದ್ಯಾರ್ಥಿಗಳು ಅಂಜದೇ ಹೆದರದೇ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷೆ ಮುಗಿದ ಬಳಿಕ ಗುಂಪಾಗಿ ಓಡಾಡುವುದಾಗಲೀ ಒಂದೆಡೆ ಸೇರುವುದಾಗಲೀ ಮಾಡಬಾರದು. ನೇರವಾಗಿ ತಮ್ಮ ನಿವಾಸಗಳಿಗೆ ಅಥವಾ ತಂಗಿರುವ ಸ್ಥಳಗಳಿಗೆ ಸಾಮಾಜಿಕ ಅಂತರದಲ್ಲಿಯೇ ತೆರಳಬೇಕು. ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಎಂದು ಸೂಚಿಸಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 