ಉಚಿತ ದಿನಸಿ, ಮಾಸ್ಕ್ ವಿತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮೇ 2,ಕೋವಿಡ್-19 ಹರಡದಂತೆ ತಡೆಯುವ ಉದ್ದೇಶದಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ತಾಲೂಕಿನ ಚಿಂದಿ ಆಯುವವರಿಗೆ ಉಚಿತ ದಿನಸಿ ಸಾಮಾನುಗಳನ್ನು ವಿತರಿಸಿದರು.
ಅಲ್ಲದೇ ಆರೋಗ್ಯ ಇಲಾಖೆ, ರಟ್ಟಿಹಳ್ಳಿ, ಹಿರೇಕೆರೂರು ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಉಚಿತ ಮಾಸ್ಕ್ಗಳನ್ನು ವಿತರಿಸಿದರು.ಈ ವೇಳೆ ಚಿಂದಿ ಆಯುವ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಕೃಷಿ ಸಚಿವರು, ಸ್ವಚ್ಛತೆ ಜೊತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಚೀಲ ಹಾಗೂ ಮುಖಗೌಸುಗಳನ್ನು ಧರಿಸಬೇಕು. ಲಾಕ್ ಡೌನ್ ವಿಸ್ತರಣೆಯಿಂದ ಯಾರೂ ಆತಂಕಕ್ಕೊಳಗಬಾರದು. ಸಾಮಾಜಿಕ ಅಂತರವೊಂದೇ ಸದ್ಯಕ್ಕೆ ಕೊರೊನಾದಿಂದ ದೂರ ಉಳಿಯಬಲ್ಲ ಉಪಾಯವಾಗಿದೆ. ಸರ್ಕಾರ ಕಾರ್ಮಿಕರು ಕೃಷಿಕರೂ ಸೇರಿದಂತೆ ಎಲ್ಲರ ನೆರವಿಗೆ ಬದ್ಧವಾಗಿದೆ. ಧೃತಿಗೆಡದೇ ಎಲ್ಲರೂ ಒಟ್ಟಾಗಿ ಈ ಮಹಾಮಾರಿಯನ್ನು ಹೊಡೆದೋಡಿಸಬೇಕೆಂದು ಕರೆ ನೀಡಿದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು. ಬಿ ಬಣಕಾರ್, ಮಹೇಂದ್ರ ಬಡಳ್ಳಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 