ಐಹೊಳೆಯವರ ಹುಟ್ಟುಹಬ್ಬದ ಕಾರ್ಯಕ್ರಮ
Aihole's birthday event
ಐಹೊಳೆಯವರ ಹುಟ್ಟುಹಬ್ಬದ ಕಾರ್ಯಕ್ರಮ
ರಾಯಬಾಗ 23: ಪ್ರಸ್ತುತ ರಾಜಕಾರಣದಲ್ಲಿ ಅಪರೂಪದಲ್ಲಿ ಅಪರೂಪ ರಾಜಕಾರಣಿ ದುರ್ಯೋಧನ ಐಹೊಳೆಯವರು ಅಂದರೆ ತಪ್ಪಾಗಲಾರದು ಎಂದು ಸಾಹಿತಿ ವಿ.ಎಸ್.ಮಾಳಿ ಹೇಳಿದರು.ಬುಧವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಶಾಸಕ ಡಿ.ಎಮ್.ಐಹೊಳೆಯವರ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಹಣಬಲ, ತೋಳಬಲ, ಜಾತಿಬಲ ಮೀರಿ ಜನರ ವಿಶ್ವಾಸ ಗೆದ್ದು ಸತತ ನಾಲ್ಕನೆಯ ಬಾರಿ ಶಾಸಕರಾಗಿ ಆಯ್ಕೆಯಾಗಿರುದಕ್ಕೆ ಒಳ್ಳೆಯ ಉದಾಹಣೆ. ಅವರು ಅತ್ಯಂತ ಸಜ್ಜನ ಮತ್ತು ಸರಳ ವ್ಯಕ್ತಿತ್ವ ಹೊಂದಿದ ವ್ಯಕ್ತಿ ಆಗಿದ್ದಾರೆ ಎಂದರು.
ಕವಲಗುಡ್ಡದ ಅಮರೇಶ್ವರ ಮಹಾರಾಜರು ಮಾತನಾಡಿ, ಆಧ್ಯಾತ್ಮಿಕತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಐಹೊಳೆಯವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.ಸಾನ್ನಿಧ್ಯವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ವಹಿಸಿದ್ದರು. ಶಾಸಕ ಡಿ.ಎಮ್.ಐಹೊಳೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು.ಅರುಣ ಐಹೊಳೆ, ಶಿವಾನಂದ ಐಹೊಳೆ ಸೇರಿ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 