ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತ
ಲೋಕದರ್ಶನ ವರದಿ
ಚಿಕ್ಕೋಡಿ ಜುಲೈ 12: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೃಷ್ಣಾ, ವೇದಗಂಗಾ ಮತ್ತು ಧೂದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ಮುಳುಗಡೆಗೊಂಡಿದ್ದ ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್ನಿಂದ 44,125 ಕ್ಯೂಸೆಕ್ ನೀರು ಹಾಗೂ ದೂಧಗಂಗಾ ನದಿಯಿಂದ 10,912 ಕ್ಯೂಸೆಕ್ ನೀರು ಹೀಗೆ ಒಟ್ಟು 55,037 ಕ್ಯೂಸೆಕ್ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ - 19 ಮಿ.ಮೀ ನವಜಾ - 09 ಮಿಮೀ, ಮಹಾಬಲೇಶ್ವರ - 11 ಎಂಎಂ, ವಾರಣಾ - 12 ಎಂಎಂ, ಕಾಳಮ್ಮವಾಡಿ - 30 ಎಂಎಂ, ರಾಧಾನಗರಿ - 13 ಎಂಎಂ, ಪಾಟಗಾಂವ - 38 ಎಂಎಂ ಮಳೆಯಾಗಿದ್ದು ವರದಿಯಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.
ದೂಧಗಂಗಾ ನದಿಗೆ ನಿಮರ್ಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿಮರ್ಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪವಿಭಾಗದ ಆರು ಸೇತುವೆಗಳು ಕೂಡಾ ಸಂಚಾರಕ್ಕೆ ಮುಕ್ತವಾಗಿವೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 