ಉಡುಪಿ ಜಿಲ್ಲೆಯ ಎಲ್ಲ ಗಡಿಗಳು ಸಂಪೂರ್ಣ ಬಂದ್
ಉಡುಪಿ, ಏಪ್ರಿಲ್ 11, ಉಡುಪಿ ಜಿಲ್ಲೆಯ ಎಲ್ಲ ಗಡಿಗಳನ್ನೂ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಯಾರು ಬರುವಂತಿಲ್ಲ ಮತ್ತು ಜಿಲ್ಲೆಯಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಜಿಲ್ಲೆಯ ನಾಲ್ಕು ಗಡಿಗಳು ಪೂರ್ಣವಾಗಿ ಬಂದ್ ಆಗಿದ್ದು, ಉ.ಕ, ದ.ಕ, ಶಿವಮೊಗ್ಗ, ಚಿಕ್ಕಮಗಳೂರು ಗಡಿಗಳು ಇದರಲ್ಲಿ ಸೇರಿಕೊಂಡಿವೆ. ಜಿಲ್ಲೆಯೊಳಗೆ ಯಾರಿಗೂ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್, ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಮುಗಿಯುವ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಹೊರ ಜಿಲ್ಲೆಗಳಲ್ಲಿರುವ ಜಿಲ್ಲೆಯ ಜನರು ಉಡುಪಿಗೆ ಬರಲು ತಯಾರಿ ನಡೆಸಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಹಾಗೆಯೇ ಉಡುಪಿಯಲ್ಲಿ ಸಿಲುಕಿರುವ ಹೊರ ಜಿಲ್ಲೆಯ ಜನರು ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಮಾಹಿತಿಯ ಕಾರಣ ಜಿಲ್ಲೆಯ ಗಡಿಗಳನ್ನು ಸೀಲ್ ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಸದ್ಯ ಉಡುಪಿ ಸುರಕ್ಷಿತವಾಗಿದೆ. ಹೊರ ಜಿಲ್ಲೆಯಿಂದ ಸೋಂಕು ಬರುವ ಅಪಾಯ ಬೇಡ. ಹಾಗಾಗಿ ಗಡಿ ಸೀಲ್ ಡೌನ್ ಮಾಡಿ ಯಾರು ಒಳಕ್ಕೆ ಬರದಂತೆ ಮತ್ತು ಹೊರ ಹೋಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ .
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 