ಸರ್ಕಾರದ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು, ಅ 21: ರಾಜ್ಯ ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದರೂ ಸಕರ್ಾರ ಕಾಮಗಾರಿಗಳಿಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಪ್ರಕಾಶ್ ರಾಥೋಡ್, ವೇಣುಗೋಪಾಲ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು.
ದೂರು ಸಲ್ಲಿಕೆ ಬಳಿಕ ವಿ.ಎಸ್.ಉಗ್ರಪ್ಪ ಮಾತನಾಡಿ, ಡಿಸೆಂಬರ್ 5 ರಂದು 15 ಕ್ಷೇತ್ರಗಳ ಉಪಚುನಾವಣೆ ನಿಗದಿಯಾಗಿದೆ. ಕಳೆದ ತಿಂಗಳ 27 ರಂದು ಚುನಾವಣಾ ಆಯೋಗ ನೀತಿ ಸಂಹಿತಿ ಆದೇಶ ವಾಪಸ್ ಪಡೆದಿದೆ. ಆ ಮೂಲಕ ಮತದಾರರ ಓಲೈಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ರಾಜ್ಯ ಚುನಾವಣಾಧಿಕಾರಿ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು ಮತದಾರರ ಓಲೈಸಲು ಉಪಚುನಾವಣೆ ನಡೆಯುವ ಕ್ಷೇತ್ರಗಳ ಪ್ರಮುಖ ನಾಯಕರನ್ನು ಬೋರ್ಡ ನಿಗಮ ಮಂಡಳಿಗಳಿಗೆ ನೇಮಕ ಮಾಡುವುದು, ಅನರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ವಿಶೇಷ ಅನುದಾನ ನೀಡುತ್ತಿರುವುದು ಮಾಡುತ್ತಿದೆ. ಅನರ್ಹ ಶಾಸಕರಿಗೆ 4 ಜಿ ಎಕ್ಸೆಂಪ್ಷನ್ ನೀಡಿದೆ ಎಂದು ಆರೋಪಿಸಿದರು.
ಟೆಂಡರ್ ಕರೆಯದೇ ಶಾಸಕರು ಹೇಳಿದವರಿಗೆ ಕಾಮಗಾರಿಗಳನ್ನು ನೀಡಲಾಗುತ್ತಿದೆ. ಇದು ಬಿಜೆಪಿಯ ಅಭ್ಯರ್ಥಿಗಳಿಗೆ ಉಪಯೋಗವಾಗುತ್ತಿದೆ. ಮತದಾರರನ್ನು ಓಲೈಸಲು ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ.
ಇದು ಜನತಾ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 123 ಹಾಗೂ ಪೀನಲ್ ಕೋಡ್ 171 ಪ್ರಕಾರ ಅಪರಾಧ. ಹೀಗಾಗಿ ಚುನಾವಣಾ ಆಯೋಗ ಸಕರ್ಾರದ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ನೀತಿ ಸಂಹಿತೆ ತಕ್ಷಣ ಜಾರಿಗೆ ತರಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು.
ಬೋರ್ಡ ಕಾರ್ಪೋರೇಷನ್ ಅಧ್ಯಕ್ಷರ ನೇಮಕಾತಿ ರದ್ದುಪಡಿಸಬೇಕು, ಜಾರಿಯಾಗಿರುವ ಕಾಮಗಾರಿಗಳನ್ನು ತಡೆಯಬೇಕು. ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. ಚುನಾವಣಾಧಿಕಾರಿಗಳು ಕ್ರಮ ಜರುಗಿಸುವ ಭರವಸೆಯನ್ನು ನೀಡಿದ್ದಾರೆ. ಬಿಜೆಪಿ ಕಾರ್ಯಕ್ರಮಗಳ ಮೂಲಕ, ತನ್ನ ಸಿದ್ಧಾಂತಗಳ ಮೂಲಕ ಚುನಾವಣೆ ಗೆಲ್ಲಲು ಹೊರಟಿಲ್ಲ. ಮತದಾರರ ಓಲೈಸಿ ಚುನಾವಣೆ ಗೆಲ್ಲಲು ಹೊರಟಿದೆ ಎಂದು ಉಗ್ರಪ್ಪ ಕಿಡಿಕಾರಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 