ವಿಕಲಚೇತನ ಮಕ್ಕಳಿಗೆ ಅವಕಾಶ ನೀಡಿ: ಖಡಾಖಡಿ
ಶೇಡಬಾಳ 22: ವಿಕಲಚೇತನ ಮಕ್ಕಳ ಶರೀರ ವಿಕಲವಾಗಿದ್ದರೂ ಅವರ ಮನಸ್ಸು ಸಬಲವಾಗಿರುತ್ತದೆ. ಅವರಿಗೆ ಅನುಕಂಪ ತೋರಿಸುವ ಬದಲಿಗೆ ಅವಕಾಶ ನೀಡಿ ಎಂದು ಕಾಗವಾಡ ಕ್ಷೇತ್ರ ಸಮನ್ವಯಾಧಿಕಾರಿ ರವೀಂದ್ರ ಖಡಾಖಡಿ ಹೇಳಿದರು.
ಅವರು ಗುರುವಾರ ದಿ. 22 ರಂದು ಕಾಗವಾಡ ಸಕರ್ಾರಿ ಮರಾಠಿ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ, ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾಯರ್ಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಕಲಚೇತನ ಮಕ್ಕಳ (ಸಿಡಬ್ಲೂಎಸ್ಎನ್) ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನುದ್ದೇಶಿಸಿ ಮಾತನಾಡುತ್ತಿದ್ದರು. ವಿಕಲಚೇತನ ಮಕ್ಕಳು ದೇವರ ಸಮಾನರಾಗಿದ್ದು ಅವರನ್ನು ತಾತ್ಸಾರದಿಂದ ಕಾಣದೇ ಪ್ರೀತಿ ತೋರಿಸಿದಾಗ ಅವರು ಎಲ್ಲರಂತೆ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿರಲು ಸಾಧ್ಯವೆಂದು ಹೇಳಿದರು.
ಅಥಣಿ ತಾಲೂಕಾ ಅಂಗವಿಕಲ ಸಂಘದ ಅಧ್ಯಕ್ಷ ಬಾಬುರಾವ ಮಾನಗಾಂವೆ ಮಾತನಾಡಿ ಮಹಿಳೆಯರು ಪ್ರಸವ ಪೂರ್ವದಲ್ಲಿ ಮುಂಜಾಗ್ರತೆ ವಹಿಸದೇ ಇರುವದರಿಂದ ವಿಕಲಚೇತನ ಮಕ್ಕಳು ಜನ್ಮ ತಾಳುತ್ತಾರೆ. ಕಾರಣ ಪ್ರಸವ ಹಾಗೂ ಪ್ರಸವ ಪೂರ್ವದಲ್ಲಿ ಗಭರ್ಿಣಿ ಮಹಿಳೆಯರು ಪೌಷ್ಠಿಕಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವಂತೆ ಕರೆ ನೀಡಿದರು. ಕೇಂದ್ರ ಹಾಗೂ ರಾಜ್ಯ ಸಕರ್ಾರಗಳು ವಿಕಲಚೇತನ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾಗವಾಡ ಗ್ರಾ.ಪಂ ಅಧ್ಯಕ್ಷ ಶ್ರೀದೇವಿ ಚೌಗಲಾ, ಅಥಣಿ ತಾಲೂಕಾ ಅಂಗವಿಕಲ ಸಂಘದ ಅಧ್ಯಕ್ಷ ಬಾಬಾರಾವ ಮಾನಗಾಂವೆ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಆರ್.ಡಿ.ಸೊಲಂದಕರ, ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಬಿ.ಎ.ಕಾಂಬಳೆ, ಸಾರ್ವಜನಿಕ ಆಸ್ಪತ್ರೆ ವೈಧ್ಯಾಧಿಕಾರಿಗಳು, ಬಿಆರ್ಪಿ ಜಿ.ಜಿ.ಹಡಪದ, ಪ್ರಧಾನ ಗುರುಗಳಾದ ಭೋಸಲೆ, ಬಿಆರ್ಸಿ ಸಿಬ್ಬಂದಿ ವರ್ಗ, ವಿಕಲಚೇತನ ಮಕ್ಕಳು, ಪಾಲಕರು ಹಾಜರಿದ್ದರು. ಜಿ.ಜಿ. ಹಡಪದ ಸ್ವಾಗತಿಸಿದರು. ಆರ್.ಟಿ.ಕುರುಬರ ವಂದಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 