ಅಂಬೇಡ್ಕರ್, ಜಗಜೀವನ್ ರಾಮ್ ಜಯಂತಿ ಸರಳವಾಗಿ ಆಚರಿಸಲು ನಿರ್ಧಾರ
ಬೆಂಗಳೂರು, ಏ. 2,ಕೋವಿಡ್- 19 ಹಿನ್ನೆಲೆಯಲ್ಲಿ ಭಾರತರತ್ನ ಡಾ. ಬಿಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಜಯಂತಿಯನ್ನು ಸರಳವಾಗಿ ಆಚರಿಸಲು ಸರ್ಕಾರ ಸೂಚಿಸಿದೆ. ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏ. 5ರಂದು ನಡೆಯಬೇಕಿರುವ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಆಚರಿಸಲು ಸಮಾಜ ಕಲ್ಯಾಣ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.ಏ.14ರಂದು ನಡೆಯಬೇಕಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಸಹ ಹೆಚ್ಚು ಜನಸಂದಣಿ ಇಲ್ಲದಂತೆ ತುಂಬಾ ಸರಳವಾಗಿ ಆಚರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ ನಾಯಕ್ ರಾಜ್ಯದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಇಬ್ಬರು ರಾಷ್ಟ್ರ ನಾಯಕರ ಜಯಂತಿಗಳನ್ನು ಆಚರಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚರ್ಚೆ ನಡೆಸಿದ್ದು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ.ಕೋವಿಡ್-19 ತಡೆಗಟ್ಟಲು ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ರಾಜ್ಯಮಟ್ಟದಲ್ಲೂ ಸರಳವಾಗಿ ಆಚರಿಸುವಂತೆ ನಿರ್ಧರಿಸಲಾಗಿದೆ ಎಂದು ಕುಮಾರ ನಾಯಕ್ ಅವರು ಜಿಲ್ಲಾಧಿಕಾರಿಗಳಿಗೆ ಬರದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 